ಮಸ್ಕಿ : ರಾಯಚೂರು ಜಿಲ್ಲೆಯ ಹಲವೆಡೆ ಸುರಿದ ಮಳೆಗೆ ರಸ್ತೆ, ಸೇತುವೆಗಳು ಜಲಾವೃತವಾಗಿವೆ. ತಾಲೂಕಿನ ವೆಂಕಟಾಪುರ ಗ್ರಾಮದ ಹಳ್ಳದ ಸೇತುವೆ ಮುಳುಗಿದ್ದರಿಂದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಪರದಾಡಬೇಕಾಯ್ತು. ಸೇತುವೆ ಮೇಲೆ ಹರಿಯುತ್ತಿದ್ದ ನೀರಿನ ಪ್ರವಾಹದಲ್ಲೇ 108 ಆಂಬ್ಯುಲೆನ್ಸ್ ಮೂಲಕ ಗರ್ಭಿಣಿಯನ್ನು ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಯ್ತು.