<p><strong>ಮಸ್ಕಿ (ರಾಯಚೂರು ಜಿಲ್ಲೆ): </strong>ಶ್ರಾವಣ ಕೊನೆ ಸೋಮವಾರ ಪವಿತ್ರ ದಿನವೆಂದು ನಂಬಿಕೆ ಇರುವುದರಿಂದ ಮಸ್ಕಿ ಪಟ್ಟಣದ ಬೆಟ್ಟದ ಮಲ್ಲಯ್ಯನ ದರ್ಶನಕ್ಕಾಗಿ ಭಕ್ತರು ಗುಂಪುಗುಂಪಾಗಿ ಬರುತ್ತಿದ್ದಾರೆ.</p>.<p>ದೇವಸ್ಥಾನವು ಎರಡನೆಯ ಶ್ರೀಶೈಲ ಎಂದು ಪ್ರಸಿದ್ಧಿ ಪಡೆದಿದೆ. ದೇವಸ್ಥಾನದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಹರಕೆ ಪೂರ್ಣ ಮಾಡಿಕೊಳ್ಳುತ್ತಿದ್ದಾರೆ.</p>.<p>ಸಾಕಷ್ಟು ಎತ್ತರದಲ್ಲಿರುವ ಬೆಟ್ಟದ ಮೇಲಿನ ದೇವಸ್ಥಾನಕ್ಕೆ ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರ ಸಂಚಾರ ಆರಂಭವಾಗಿದೆ. ಮಹಿಳೆಯರು , ಮಕ್ಕಳು ಕೂಡಾ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಮಲ್ಲಯ್ಯನ ವಿಗ್ರಹಕ್ಕೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುತ್ತಿದ್ದಾರೆ.</p>.<p>ಬಂಡೆಯಲ್ಲಿ ಮೂಡಿರುವ ಮಲ್ಲಯ್ಯ ವಿಗ್ರಹಕ್ಕೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರು ನೆರವೇರಿಸಿದರು. ಸೋಮವಾರ ಸಂಜೆವರೆಗೂ ಭಕ್ತರ ದಂಡು ಕಾಣುತ್ತದೆ.</p>.<p>ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಶಾಸಕ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ತಹಶೀಲ್ದಾರ್ ಕವಿತಾ ಆರ್. ಸೇರಿದಂತೆ ಅನೇಕರು ಮುಖಂಡರು, ಅಧಿಕಾರಿಗಳು ಸಹ ಬೆಟ್ಟ ಹತ್ತಿ ಮಲ್ಲಯ್ಯನ ವಿಗ್ರಹಕ್ಕೆ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ (ರಾಯಚೂರು ಜಿಲ್ಲೆ): </strong>ಶ್ರಾವಣ ಕೊನೆ ಸೋಮವಾರ ಪವಿತ್ರ ದಿನವೆಂದು ನಂಬಿಕೆ ಇರುವುದರಿಂದ ಮಸ್ಕಿ ಪಟ್ಟಣದ ಬೆಟ್ಟದ ಮಲ್ಲಯ್ಯನ ದರ್ಶನಕ್ಕಾಗಿ ಭಕ್ತರು ಗುಂಪುಗುಂಪಾಗಿ ಬರುತ್ತಿದ್ದಾರೆ.</p>.<p>ದೇವಸ್ಥಾನವು ಎರಡನೆಯ ಶ್ರೀಶೈಲ ಎಂದು ಪ್ರಸಿದ್ಧಿ ಪಡೆದಿದೆ. ದೇವಸ್ಥಾನದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಹರಕೆ ಪೂರ್ಣ ಮಾಡಿಕೊಳ್ಳುತ್ತಿದ್ದಾರೆ.</p>.<p>ಸಾಕಷ್ಟು ಎತ್ತರದಲ್ಲಿರುವ ಬೆಟ್ಟದ ಮೇಲಿನ ದೇವಸ್ಥಾನಕ್ಕೆ ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರ ಸಂಚಾರ ಆರಂಭವಾಗಿದೆ. ಮಹಿಳೆಯರು , ಮಕ್ಕಳು ಕೂಡಾ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಮಲ್ಲಯ್ಯನ ವಿಗ್ರಹಕ್ಕೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುತ್ತಿದ್ದಾರೆ.</p>.<p>ಬಂಡೆಯಲ್ಲಿ ಮೂಡಿರುವ ಮಲ್ಲಯ್ಯ ವಿಗ್ರಹಕ್ಕೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರು ನೆರವೇರಿಸಿದರು. ಸೋಮವಾರ ಸಂಜೆವರೆಗೂ ಭಕ್ತರ ದಂಡು ಕಾಣುತ್ತದೆ.</p>.<p>ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಶಾಸಕ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ತಹಶೀಲ್ದಾರ್ ಕವಿತಾ ಆರ್. ಸೇರಿದಂತೆ ಅನೇಕರು ಮುಖಂಡರು, ಅಧಿಕಾರಿಗಳು ಸಹ ಬೆಟ್ಟ ಹತ್ತಿ ಮಲ್ಲಯ್ಯನ ವಿಗ್ರಹಕ್ಕೆ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>