<p><strong>ರಾಯಚೂರು:</strong> ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರಿದಿದೆ. 24 ಗಂಟೆಗಳ ಅವಧಿಯಲ್ಲಿ ರಾಯಚೂರಲ್ಲಿ 50 ಮಿ.ಮೀ ಮಳೆಯಾಗಿದೆ. ಸಿಂಧನೂರು, ಮಾನ್ವಿ, ಲಿಂಗಸುಗೂರು, ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ ಮಳೆ ಸುರಿಯುತ್ತಿದೆ.</p><p>ಮಸ್ಕಿ ತಾಲ್ಲೂಕಿನ ಮಸ್ಕಿ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದರಿಂದ ಶನಿವಾರ ಬೆಳಿಗ್ಗೆ ನಾಲ್ಕು ಗೇಟ್ಗಳ ಮೂಲಕ ಹೆಚ್ಚಿನ ನೀರನ್ನು ಮಸ್ಕಿಯ ಹಿರೇ ಹಳ್ಳಕ್ಕೆ ಬಿಡಲಾಗಿದೆ. ಹಳ್ಳ ತುಂಬಿ ಹರಿಯುತ್ತಿದೆ. ಪ್ರವಾಹದ ಬೀತಿ ಉಂಟಾಗಿದೆ. </p><p>‘ಹಳ್ಳದ ದಂಡೆಯ ಗ್ರಾಮಗಳಿಗೆ ಹಳ್ಳದಲ್ಲಿ ಇಳಿಯದಂತೆ ಶನಿವಾರ ಬೆಳಿಗ್ಗೆ ಎಚ್ಚರಿಕೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಮಂಜುನಾಥ ಬೋಗಾವತಿ ಪ್ರಜಾವಾಣಿಗೆ ತಿಳಿಸಿದ್ದಾರೆ.</p><p>ಮಳೆಗೆ ಬೆಟ್ಟದಿಂದ ಹರಿದು ಬಂದ ನೀರು ಮಸ್ಕಿಯ ಬಸವೇಶ್ವರ ನಗರಕ್ಕೆ ನುಗ್ಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ತಹಶೀಲ್ದಾರ್ ಕಚೇರಿ ಸುತ್ತಮುತ್ತ ನೀರು ನಿಂತು ಕೆರೆಯಂತಾಗಿದೆ. ಬಸವೇಶ್ವರ ನಗರದಲ್ಲಿ ನಿವಾಸಿಗಳು ಬೆಳಿಗ್ಗೆ ನಿತ್ಯದ ಕೆಲಸಗಳಿಗೆ ಹೋಗಲು ಪರದಾಡುವಂತಾಯಿತು. </p><p>ವಾಲ್ಮೀಕಿ ನಗರ, ಸೋಮನಾಥ ನಗರ, ಗಾಂಧಿ ನಗರ ಸೇರಿದಂತೆ ವಿವಿದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮಳಿಗೆಳಿಗೆ ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರಿದಿದೆ. 24 ಗಂಟೆಗಳ ಅವಧಿಯಲ್ಲಿ ರಾಯಚೂರಲ್ಲಿ 50 ಮಿ.ಮೀ ಮಳೆಯಾಗಿದೆ. ಸಿಂಧನೂರು, ಮಾನ್ವಿ, ಲಿಂಗಸುಗೂರು, ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿ ಮಳೆ ಸುರಿಯುತ್ತಿದೆ.</p><p>ಮಸ್ಕಿ ತಾಲ್ಲೂಕಿನ ಮಸ್ಕಿ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದರಿಂದ ಶನಿವಾರ ಬೆಳಿಗ್ಗೆ ನಾಲ್ಕು ಗೇಟ್ಗಳ ಮೂಲಕ ಹೆಚ್ಚಿನ ನೀರನ್ನು ಮಸ್ಕಿಯ ಹಿರೇ ಹಳ್ಳಕ್ಕೆ ಬಿಡಲಾಗಿದೆ. ಹಳ್ಳ ತುಂಬಿ ಹರಿಯುತ್ತಿದೆ. ಪ್ರವಾಹದ ಬೀತಿ ಉಂಟಾಗಿದೆ. </p><p>‘ಹಳ್ಳದ ದಂಡೆಯ ಗ್ರಾಮಗಳಿಗೆ ಹಳ್ಳದಲ್ಲಿ ಇಳಿಯದಂತೆ ಶನಿವಾರ ಬೆಳಿಗ್ಗೆ ಎಚ್ಚರಿಕೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಮಂಜುನಾಥ ಬೋಗಾವತಿ ಪ್ರಜಾವಾಣಿಗೆ ತಿಳಿಸಿದ್ದಾರೆ.</p><p>ಮಳೆಗೆ ಬೆಟ್ಟದಿಂದ ಹರಿದು ಬಂದ ನೀರು ಮಸ್ಕಿಯ ಬಸವೇಶ್ವರ ನಗರಕ್ಕೆ ನುಗ್ಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ತಹಶೀಲ್ದಾರ್ ಕಚೇರಿ ಸುತ್ತಮುತ್ತ ನೀರು ನಿಂತು ಕೆರೆಯಂತಾಗಿದೆ. ಬಸವೇಶ್ವರ ನಗರದಲ್ಲಿ ನಿವಾಸಿಗಳು ಬೆಳಿಗ್ಗೆ ನಿತ್ಯದ ಕೆಲಸಗಳಿಗೆ ಹೋಗಲು ಪರದಾಡುವಂತಾಯಿತು. </p><p>ವಾಲ್ಮೀಕಿ ನಗರ, ಸೋಮನಾಥ ನಗರ, ಗಾಂಧಿ ನಗರ ಸೇರಿದಂತೆ ವಿವಿದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮಳಿಗೆಳಿಗೆ ನುಗ್ಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>