<p><strong>ಮಸ್ಕಿ</strong>: ಪಟ್ಟಣದ 1ನೇ ವಾರ್ಡ್ನ ಬಸವೇಶ್ವರ ನಗರದಲ್ಲಿ ಅಮೃತ 2.0 ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಯಿಂದಾಗಿ ಹಾಳಾಗಿದ್ದ ರಸ್ತೆಗಳನ್ನು ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಪುರಸಭೆ ಆಡಳಿತ ಗುರುವಾರ ಮರ್ಮ್ ಹಾಕಿ ಅಭಿವೃದ್ಧಿಪಡಿಸಿತು.</p>.<p>ಪುರಸಭೆಯಿಂದ ಮರ್ಮ್ ಹಾಕಿದರೆ ಸ್ಥಳೀಯ ನಿವಾಸಿಗಳು ಟ್ರ್ಯಾಕ್ಟರ್ನಿಂದ ಹಾಕಿದ ಮರ್ಮ್ ಅನ್ನು ಸಮತಟ್ಟು ಮಾಡಿದರು. </p>.<p>ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಬೇಟಿ ನೀಡಿ ಪರಿಶೀಲಿಸಿದರು. ಬರುವ ದಿನಗಳಲ್ಲಿ ಬಸವೇಶ್ವರ ನಗರದ ಚರಂಡಿ ಹಾಗೂ ರಸ್ತೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಮುಖಂಡ ಬಸನಗೌಡ ಪೊಲೀಸ್ ಪಾಟೀಲ, ವೀರಭದ್ರಗೌಡ ಹಳೇಕೊಟೆ, ಪುರಸಭೆಯ ಸುನೀಲ್, ಹಜರ್, ರವಿಕುಮಾರ ಸಿಂಗ್ ಇದ್ದರು.</p>.<p>ಸತತವಾಗಿ ಸುರಿಯುತ್ತಿರುವ ಮಳೆಯಿಂದ ಅಮೃತ 2.0 ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸಲು ಅಗೆದ ರಸ್ತೆಗಳು ಕೆಸರು ಗದ್ದೆಗಳಾಗಿದ್ದವು. ಸವಳು ಮಣ್ಣು ಬಿದ್ದಿದ್ದರಿಂದ ಬೈಕ್ ಸವಾರರು ಪರದಾಡುತ್ತಿದ್ದರು. ವಾಹನಗಳು ಗುಂಡಿಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿದ್ದವು. ಈ ಬಗ್ಗೆ ‘ಅಮೃತ 2.0 ಪೈಪ್ ಲೈನ್ ಕಾಮಗಾರಿ- ಹಾಳಾದ ರಸ್ತೆಗಳು’ ಶೀರ್ಷಿಕೆ ಅಡಿಯಲ್ಲಿ ಅ.13ರಂದು ಪ್ರಜಾವಾಣಿಯಲ್ಲಿ ಸುದ್ದಿ ಪ್ರಕಟವಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಪಟ್ಟಣದ 1ನೇ ವಾರ್ಡ್ನ ಬಸವೇಶ್ವರ ನಗರದಲ್ಲಿ ಅಮೃತ 2.0 ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಯಿಂದಾಗಿ ಹಾಳಾಗಿದ್ದ ರಸ್ತೆಗಳನ್ನು ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಪುರಸಭೆ ಆಡಳಿತ ಗುರುವಾರ ಮರ್ಮ್ ಹಾಕಿ ಅಭಿವೃದ್ಧಿಪಡಿಸಿತು.</p>.<p>ಪುರಸಭೆಯಿಂದ ಮರ್ಮ್ ಹಾಕಿದರೆ ಸ್ಥಳೀಯ ನಿವಾಸಿಗಳು ಟ್ರ್ಯಾಕ್ಟರ್ನಿಂದ ಹಾಕಿದ ಮರ್ಮ್ ಅನ್ನು ಸಮತಟ್ಟು ಮಾಡಿದರು. </p>.<p>ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಬೇಟಿ ನೀಡಿ ಪರಿಶೀಲಿಸಿದರು. ಬರುವ ದಿನಗಳಲ್ಲಿ ಬಸವೇಶ್ವರ ನಗರದ ಚರಂಡಿ ಹಾಗೂ ರಸ್ತೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಮುಖಂಡ ಬಸನಗೌಡ ಪೊಲೀಸ್ ಪಾಟೀಲ, ವೀರಭದ್ರಗೌಡ ಹಳೇಕೊಟೆ, ಪುರಸಭೆಯ ಸುನೀಲ್, ಹಜರ್, ರವಿಕುಮಾರ ಸಿಂಗ್ ಇದ್ದರು.</p>.<p>ಸತತವಾಗಿ ಸುರಿಯುತ್ತಿರುವ ಮಳೆಯಿಂದ ಅಮೃತ 2.0 ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸಲು ಅಗೆದ ರಸ್ತೆಗಳು ಕೆಸರು ಗದ್ದೆಗಳಾಗಿದ್ದವು. ಸವಳು ಮಣ್ಣು ಬಿದ್ದಿದ್ದರಿಂದ ಬೈಕ್ ಸವಾರರು ಪರದಾಡುತ್ತಿದ್ದರು. ವಾಹನಗಳು ಗುಂಡಿಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿದ್ದವು. ಈ ಬಗ್ಗೆ ‘ಅಮೃತ 2.0 ಪೈಪ್ ಲೈನ್ ಕಾಮಗಾರಿ- ಹಾಳಾದ ರಸ್ತೆಗಳು’ ಶೀರ್ಷಿಕೆ ಅಡಿಯಲ್ಲಿ ಅ.13ರಂದು ಪ್ರಜಾವಾಣಿಯಲ್ಲಿ ಸುದ್ದಿ ಪ್ರಕಟವಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>