<p><strong>ಮಸ್ಕಿ</strong>: ಈ ವಿಧಾನಸಭಾ ಕ್ಷೇತ್ರದ ಜನರಿಗೆ ಕೃಷ್ಣಾ ನದಿಯಿಂದ ಕುಡಿಯುವ ನೀರು ಕೊಡುವ ಜಲಧಾರೆ ಯೋಜನೆಯ ಕಾಮಗಾರಿ ನಿಗದಿತ ಅವಧಿಯೊಳಗೆ ಮುಗಿಸುವಂತೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಿಂಧನೂರು ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕ್ಷೇತ್ರದ ಜಲಧಾರೆ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಇಷ್ಟೋತ್ತಿಗೆ ಯೋಜನೆ ಪೂರ್ಣಗೊಳಿಸಬೇಕಾಗಿತ್ತು. ಆದರೆ, ಕಾಮಗಾರಿ ಮುಗಿಸಲು ಇನ್ನೂ ಆರು ತಿಂಗಳ ಕಾಲಾವಕಾಶವನ್ನು ಗುತ್ತಿಗೆದಾರರು ಪಡೆದುಕೊಂಡಿದ್ದಾರೆ. ನೀಡಿದ ಕಾಲಾವಕಾಶದ ಒಳಗಾಗಿ ಯೋಜನೆಯ ಕಾಮಗಾರಿ ಮುಗಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಯೋಜನೆ ಪೂರ್ಣಗೊಳಿಸಲು ಏನಾದರೂ ಅಡ್ಡಿಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಬಗೆಹರಿಸಿ ಸಹಕರಿಸಬೇಕು’ ಎಂದು ಸೂಚಿಸಿದರು.</p>.<p>‘ಯೋಜನೆ ಪೂರ್ಣಗೊಂಡರೆ ಅಮೃತ ಯೋಜನೆ 2.0 ಮೂಲಕ ಮಸ್ಕಿ, ತುರ್ವಿಹಾಳ ಹಾಗೂ ಬಳಗಾನೂರು ಪಟ್ಟಣಗಳಿಗೆ ಹೊಸ ಪೈಪ್ಲೈನ್ ಮಾಡಿ ನೀರು ಕೊಡಲಾಗುವುದು’ ಎಂದರು.</p>.<p>‘ಕ್ಷೇತ್ರದ ಎಲ್ಲಾ ಗ್ರಾಮೀಣ ಪ್ರದೇಶದ ಜನರಿಗೆ ಕೃಷ್ಣಾ ನದಿಯಿಂದ ನೀರು ಕೊಡಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒಗಳಾದ ಅಮರೇಶ ಯಾದವ್, ಚಂದ್ರಶೇಖರ, ಯೋಜನೆಯ ಮುಖ್ಯ ಎಂಜನಿಯರ್ ಸೇರಿದಂತೆ ಸಿಂಧನೂರು, ಮಾನ್ವಿ, ಲಿಂಗಸುಗೂರು ತಾಲ್ಲೂಕಿನ ಅಧಿಕಾರಿಗಳು, ಗುತ್ತಿಗೆದಾರ ಕಂಪನಿಯ ವ್ಯವಸ್ಥಾಪಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಈ ವಿಧಾನಸಭಾ ಕ್ಷೇತ್ರದ ಜನರಿಗೆ ಕೃಷ್ಣಾ ನದಿಯಿಂದ ಕುಡಿಯುವ ನೀರು ಕೊಡುವ ಜಲಧಾರೆ ಯೋಜನೆಯ ಕಾಮಗಾರಿ ನಿಗದಿತ ಅವಧಿಯೊಳಗೆ ಮುಗಿಸುವಂತೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಿಂಧನೂರು ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕ್ಷೇತ್ರದ ಜಲಧಾರೆ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಇಷ್ಟೋತ್ತಿಗೆ ಯೋಜನೆ ಪೂರ್ಣಗೊಳಿಸಬೇಕಾಗಿತ್ತು. ಆದರೆ, ಕಾಮಗಾರಿ ಮುಗಿಸಲು ಇನ್ನೂ ಆರು ತಿಂಗಳ ಕಾಲಾವಕಾಶವನ್ನು ಗುತ್ತಿಗೆದಾರರು ಪಡೆದುಕೊಂಡಿದ್ದಾರೆ. ನೀಡಿದ ಕಾಲಾವಕಾಶದ ಒಳಗಾಗಿ ಯೋಜನೆಯ ಕಾಮಗಾರಿ ಮುಗಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಯೋಜನೆ ಪೂರ್ಣಗೊಳಿಸಲು ಏನಾದರೂ ಅಡ್ಡಿಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಬಗೆಹರಿಸಿ ಸಹಕರಿಸಬೇಕು’ ಎಂದು ಸೂಚಿಸಿದರು.</p>.<p>‘ಯೋಜನೆ ಪೂರ್ಣಗೊಂಡರೆ ಅಮೃತ ಯೋಜನೆ 2.0 ಮೂಲಕ ಮಸ್ಕಿ, ತುರ್ವಿಹಾಳ ಹಾಗೂ ಬಳಗಾನೂರು ಪಟ್ಟಣಗಳಿಗೆ ಹೊಸ ಪೈಪ್ಲೈನ್ ಮಾಡಿ ನೀರು ಕೊಡಲಾಗುವುದು’ ಎಂದರು.</p>.<p>‘ಕ್ಷೇತ್ರದ ಎಲ್ಲಾ ಗ್ರಾಮೀಣ ಪ್ರದೇಶದ ಜನರಿಗೆ ಕೃಷ್ಣಾ ನದಿಯಿಂದ ನೀರು ಕೊಡಲಾಗುವುದು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒಗಳಾದ ಅಮರೇಶ ಯಾದವ್, ಚಂದ್ರಶೇಖರ, ಯೋಜನೆಯ ಮುಖ್ಯ ಎಂಜನಿಯರ್ ಸೇರಿದಂತೆ ಸಿಂಧನೂರು, ಮಾನ್ವಿ, ಲಿಂಗಸುಗೂರು ತಾಲ್ಲೂಕಿನ ಅಧಿಕಾರಿಗಳು, ಗುತ್ತಿಗೆದಾರ ಕಂಪನಿಯ ವ್ಯವಸ್ಥಾಪಕರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>