<p><strong>ರಾಯಚೂರು:</strong> ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಸ್ಲಿಂ ವೈದ್ಯೆಯ ನಕಾಬ್ ಎಳೆದಿರುವುದನ್ನು ವಿರೋಧಿಸಿ ವಕ್ಫ್ ಸಂರಕ್ಷಣಾ ಸಂಘದ ನೇತೃತ್ವದಲ್ಲಿ ಮುಸ್ಲಿಂ ಮಹಿಳೆಯರು ಇಲ್ಲಿಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p><p>ಮುಸ್ಲಿಂ ಸಂಪ್ರದಾಯವನ್ನು ಅವಮಾನಿಸಿರುವ ನಿತೀಶ್ ಕುಮಾರ್, ತಕ್ಷಣವೇ ಕ್ಷಮೆ ಯಾಚಿಸಬೇಕು. ದೇಶದಲ್ಲಿ ಎಲ್ಲ ಜನ ಸಮುದಾಯವರಿಗೂ ಅವರು ಇಷ್ಟಪಡುವ ಸಾಂಪ್ರದಾಯಿಕ ಬಟ್ಟೆಗಳನ್ನು ತೊಡುವ ಅಧಿಕಾರ ಇದೆ. ಆದರೆ, ನಿತೀಶ್ ಕುಮಾರ್ ನಡೆ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ನಂತರ ಮಹಿಳೆಯರು ನಿತೀಶ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರ ಹಾಕಿದರು. ಅಲ್ಪಸಂಖ್ಯಾತರು ಹಾಗೂ ಅಲ್ಪಸಂಖ್ಯಾತ ಮಹಿಳೆಯರನ್ನು ಅವಮಾನಿಸುವುದು ನಿರಂತರವಾಗಿ ನಡೆದಿದೆ. ಇನ್ನು ಇಂತಹ ಘಟನೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.</p><p>ಸಂಘದ ಅಧ್ಯಕ್ಷ ಸಯ್ಯದ್ ಮೊಹಮ್ಮದ್ ಸಾಹೇಬ್ ಹಾಗೂ ಕಾರ್ಯದರ್ಶಿ ತೌಸೀಫ್ ಅಹ್ಮದ್ ಮಾತನಾಡಿ, ‘ಇಂತಹ ಕ್ರಮಗಳು ಸಂವಿಧಾನ ಹಾಗೂ ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿವೆ‘ ಎಂದು ಟೀಕಿಸಿದರು. </p><p>ಪ್ರತಿಭಟನೆಯಲ್ಲಿ ಅಕ್ಬರ್ ಹುಸೇನ್ ನಗುಂಡಿ, ಫರ್ಜಾನಾ ಖಾನಂ, ನಯ್ಯರ್ ತಯ್ಯಬಾ, ಮತೀನ್ ಅನ್ಸಾರಿ, ಸಯ್ಯದ್ ಇನಾಯತುಲ್ಲಾ ಕ್ವಾದ್ರಿ ಸಾಹೇಬ್, ಸಯ್ಯದ್ ಮುರ್ಷದ್ ಜಾನಿ ಸಾಹೇಬ್, ಮೊಹಮ್ಮದ್ ಮಸೂಮ್, ಜಫರ್ ಅಹ್ಮದ್, ಎಂ.ಡಿ. ಶಫಿ, ತಬ್ಬಸ್ಸುಮ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಸ್ಲಿಂ ವೈದ್ಯೆಯ ನಕಾಬ್ ಎಳೆದಿರುವುದನ್ನು ವಿರೋಧಿಸಿ ವಕ್ಫ್ ಸಂರಕ್ಷಣಾ ಸಂಘದ ನೇತೃತ್ವದಲ್ಲಿ ಮುಸ್ಲಿಂ ಮಹಿಳೆಯರು ಇಲ್ಲಿಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.</p><p>ಮುಸ್ಲಿಂ ಸಂಪ್ರದಾಯವನ್ನು ಅವಮಾನಿಸಿರುವ ನಿತೀಶ್ ಕುಮಾರ್, ತಕ್ಷಣವೇ ಕ್ಷಮೆ ಯಾಚಿಸಬೇಕು. ದೇಶದಲ್ಲಿ ಎಲ್ಲ ಜನ ಸಮುದಾಯವರಿಗೂ ಅವರು ಇಷ್ಟಪಡುವ ಸಾಂಪ್ರದಾಯಿಕ ಬಟ್ಟೆಗಳನ್ನು ತೊಡುವ ಅಧಿಕಾರ ಇದೆ. ಆದರೆ, ನಿತೀಶ್ ಕುಮಾರ್ ನಡೆ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ನಂತರ ಮಹಿಳೆಯರು ನಿತೀಶ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರ ಹಾಕಿದರು. ಅಲ್ಪಸಂಖ್ಯಾತರು ಹಾಗೂ ಅಲ್ಪಸಂಖ್ಯಾತ ಮಹಿಳೆಯರನ್ನು ಅವಮಾನಿಸುವುದು ನಿರಂತರವಾಗಿ ನಡೆದಿದೆ. ಇನ್ನು ಇಂತಹ ಘಟನೆಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.</p><p>ಸಂಘದ ಅಧ್ಯಕ್ಷ ಸಯ್ಯದ್ ಮೊಹಮ್ಮದ್ ಸಾಹೇಬ್ ಹಾಗೂ ಕಾರ್ಯದರ್ಶಿ ತೌಸೀಫ್ ಅಹ್ಮದ್ ಮಾತನಾಡಿ, ‘ಇಂತಹ ಕ್ರಮಗಳು ಸಂವಿಧಾನ ಹಾಗೂ ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿವೆ‘ ಎಂದು ಟೀಕಿಸಿದರು. </p><p>ಪ್ರತಿಭಟನೆಯಲ್ಲಿ ಅಕ್ಬರ್ ಹುಸೇನ್ ನಗುಂಡಿ, ಫರ್ಜಾನಾ ಖಾನಂ, ನಯ್ಯರ್ ತಯ್ಯಬಾ, ಮತೀನ್ ಅನ್ಸಾರಿ, ಸಯ್ಯದ್ ಇನಾಯತುಲ್ಲಾ ಕ್ವಾದ್ರಿ ಸಾಹೇಬ್, ಸಯ್ಯದ್ ಮುರ್ಷದ್ ಜಾನಿ ಸಾಹೇಬ್, ಮೊಹಮ್ಮದ್ ಮಸೂಮ್, ಜಫರ್ ಅಹ್ಮದ್, ಎಂ.ಡಿ. ಶಫಿ, ತಬ್ಬಸ್ಸುಮ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>