ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ದಸ್ತಗೀರ್ಸಾಬ್ ದಿನ್ನಿ ಮಾತನಾಡಿ, ಸಂವಿಧಾನವು ಹಲವಾರು ಮಹತ್ವದ ಹಕ್ಕುಗಳನ್ನು ನೀಡಿದ್ದು ಸಾಮಾಜಿಕ ಬದುಕಿಗೆ ಪೂರಕವಾಗಿವೆ. ಸಂವಿಧಾನದ ಆಶಯಗಳಿಗೆ ವಿರೋಧಿಯಾದ ಘಟನೆಗಳು ದೇಶದಲ್ಲಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಂವಿಧಾನವನ್ನು ಗೌರವಿಸಬೇಕು. ಬೇರೆ ದೇಶಗಳಿಗೂ ಮಾದರಿಯಾಗುವಂತಹ ಸಂವಿಧಾನವನ್ನು ರೂಪಿಸಿಕೊಟ್ಟ ಡಾ ಅಂಬೇಡ್ಕರ್ ಅವರ ಕಾರ್ಯವನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು.