ಒಂದು ಲಕ್ಷ ಕ್ಯುಸೆಕ್ ನಾರಾಯಣಪೂರದಿಂದ ಅಣೆಕಟ್ಟೆಯಿಂದ ಹೊರಹರಿವು ಇದ್ದರೆ ನದಿಪಾತ್ರದಲ್ಲಿ ಜನಜಾನುವಾರಗಳ ಸುರಕ್ಷತೆ ದೃಷ್ಟಿಯಿಂದ ಯಾವುದೇ ಚಟುವಟಿಕೆ ನಡೆಸಬಾರದು. 1.5 ಲಕ್ಷ ಕ್ಯುಸೆಕ್ ನೀರು ಹರಿದು ಬಂದರೆ ಸುರಪುರ ತಾಲ್ಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮವು ನಡುಗಡ್ಡೆಯಾಗಬಹುದು. 2 ಲಕ್ಷ ಕ್ಯುಸೆಕ್ ಹರಿದು ಬಂದರೆ ದೇವದುರ್ಗ–ಕಲಬುರ್ಗಿ ರಾಜ್ಯ ಹೆದ್ದಾರಿ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು. 2.5 ಲಕ್ಷ ನೀರು ಹರಿದು ಬಂದರೆ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ, ಯರಗೋಡಿ ಸೇತುವೆಗಳು ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು. 3 ಲಕ್ಷ ಕ್ಯುಸೆಕ್ ನೀರು ಹರಿದು ಬಂದರೆ ಕೃಷ್ಣಾನದಿಯ ಇಕ್ಕೆಲಗಳಲ್ಲಿ ಪ್ರವಾಹ ಉಕ್ಕಿ ಹರಿಯುವುದರಿಂದ ನದಿಪಾತ್ರದ ಗ್ರಾಮಗಳ ಜನರಿಗೆಪ್ರವಾಹದ ಸುರಕ್ಷತೆ ಕುರಿತು ಮುನ್ನಚ್ಚರಿಕೆಯಿಂದ ಇರುವಂತೆ ಸಂಬಂಧಿಸಿದ ಅಧಿಕಾರಿಗಳು ಸೂಚಿಸಬೇಕು ಎಂದು ತಿಳಿಸಿದ್ದಾರೆ.