<p><strong>ಶಕ್ತಿನಗರ</strong>: ಗ್ರಾಮೀಣ ಭಾಗದ ರೈತರ ಕೃಷಿ ಕೆಲಸಕ್ಕೆ ಮಾತ್ರವಲ್ಲದೆ ಕೃಷಿ ಪೂರಕ ಚಟುವಟಿಕೆ, ಜಾನುವಾರು ಸಾಕಣೆ, ದನದ ಶೆಡ್ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಆಸರೆಯಾಗಿದೆ.</p>.<p>4 ಎಕರೆ ಜಮೀನು ಹೊಂದಿದ ಬಿ.ಹನುಮಾಪೂರು ಗ್ರಾಮದ ರೈತ ಬಸಪ್ಪ ಅವರು ಎರಡು ಆಕಳು, ಎರಡು ಎತ್ತುಗಳನ್ನು ಸಾಕಿದ್ದಾರೆ. ಅವುಗಳನ್ನು ಮನೆ ಮುಂದಿನ ಖಾಲಿ ಜಾಗದಲ್ಲಿ ಕಟ್ಟುತ್ತಿದ್ದರು. ತನ್ನ ಜಾನುವಾರುಗಳಿಗೆ ಸೂರು ಒದಗಿಸಬೇಕು ಎಂದುಕೊಂಡಿದ್ದರೂ ಆರ್ಥಿಕ ಪರಿಸ್ಥಿತಿಯಿಂದ ಸಾಧ್ಯವಾಗಿರಲಿಲ್ಲ.</p>.<p>ಜಾನುವಾರುಗಳ ರಕ್ಷಣೆಗಾಗಿ ನರೇಗಾ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಸಾಮಾನ್ಯ ವರ್ಗದವರಿಗೆ ಈ ಮೊದಲು ₹19,500 ಸಹಾಯಧನ ಸಿಗುತ್ತಿತ್ತು. ಈಗ ಪರಿಷ್ಕೃತ ಆದೇಶದಂತೆ ಎಲ್ಲ ವರ್ಗದವರಿಗೆ ₹57 ಸಾವಿರ ಸಹಾಯಧನ ನೀಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ರಾಯಚೂರು ತಾಲ್ಲೂಕಿನ ಹೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಹನುಮಾಪೂರು ಗ್ರಾಮದ ಬಸಪ್ಪ ಮತ್ತು ಗೋವಿಂದ ಅವರು ದನದ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದಾರೆ.</p>.<p>10 ಅಡಿ ಅಗಲ, 18 ಅಡಿ ಉದ್ದ, 5 ಅಡಿ ಎತ್ತರದ ಗೋಡೆ ಸೇರಿದಂತೆ ಜಾನುವಾರುಗಳಿಗೆ ಮೇವು ತಿನ್ನಲು ಗೋದಲಿ, ಕಾಂಕ್ರೀಟ್ ಬೆಡ್, ತಗಡಿನ ಶೀಟ್ ಹಾಕಿ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡಿದ್ದಾರೆ.</p>.<p>‘ಉದ್ಯೋಗ ಖಾತರಿ ಯೋಜನೆಯಡಿ ದನಗಳಿಗೆ ಕೊಟ್ಟಿಗೆ ನಿರ್ಮಿಸಿಕೊಂಡಿದ್ದೇವೆ. ಈಗಾಗಲೇ ಕೂಲಿ ಮೊತ್ತ ತಲಾ ₹7 ಸಾವಿರ ಬಂದಿದೆ. ಸಾಮಗ್ರಿ ಮೊತ್ತ ತಲಾ ₹50 ಸಾವಿರ ಬರಬೇಕು’ ಎಂದು ರೈತರಾದ ಬಸಪ್ಪ ಮತ್ತು ಗೋವಿಂದ ಹೇಳಿದರು.</p>.<p>‘ವೈಯಕ್ತಿಕ ಕಾಮಗಾರಿಗಳ ಅನುದಾನದಡಿ ಉತ್ತಮವಾದ ಜಾನುವಾರು ಕೊಟ್ಟಿಗೆ ನಿರ್ಮಾಣದಿಂದ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಪವಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ</strong>: ಗ್ರಾಮೀಣ ಭಾಗದ ರೈತರ ಕೃಷಿ ಕೆಲಸಕ್ಕೆ ಮಾತ್ರವಲ್ಲದೆ ಕೃಷಿ ಪೂರಕ ಚಟುವಟಿಕೆ, ಜಾನುವಾರು ಸಾಕಣೆ, ದನದ ಶೆಡ್ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಆಸರೆಯಾಗಿದೆ.</p>.<p>4 ಎಕರೆ ಜಮೀನು ಹೊಂದಿದ ಬಿ.ಹನುಮಾಪೂರು ಗ್ರಾಮದ ರೈತ ಬಸಪ್ಪ ಅವರು ಎರಡು ಆಕಳು, ಎರಡು ಎತ್ತುಗಳನ್ನು ಸಾಕಿದ್ದಾರೆ. ಅವುಗಳನ್ನು ಮನೆ ಮುಂದಿನ ಖಾಲಿ ಜಾಗದಲ್ಲಿ ಕಟ್ಟುತ್ತಿದ್ದರು. ತನ್ನ ಜಾನುವಾರುಗಳಿಗೆ ಸೂರು ಒದಗಿಸಬೇಕು ಎಂದುಕೊಂಡಿದ್ದರೂ ಆರ್ಥಿಕ ಪರಿಸ್ಥಿತಿಯಿಂದ ಸಾಧ್ಯವಾಗಿರಲಿಲ್ಲ.</p>.<p>ಜಾನುವಾರುಗಳ ರಕ್ಷಣೆಗಾಗಿ ನರೇಗಾ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಸಾಮಾನ್ಯ ವರ್ಗದವರಿಗೆ ಈ ಮೊದಲು ₹19,500 ಸಹಾಯಧನ ಸಿಗುತ್ತಿತ್ತು. ಈಗ ಪರಿಷ್ಕೃತ ಆದೇಶದಂತೆ ಎಲ್ಲ ವರ್ಗದವರಿಗೆ ₹57 ಸಾವಿರ ಸಹಾಯಧನ ನೀಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ರಾಯಚೂರು ತಾಲ್ಲೂಕಿನ ಹೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಹನುಮಾಪೂರು ಗ್ರಾಮದ ಬಸಪ್ಪ ಮತ್ತು ಗೋವಿಂದ ಅವರು ದನದ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದಾರೆ.</p>.<p>10 ಅಡಿ ಅಗಲ, 18 ಅಡಿ ಉದ್ದ, 5 ಅಡಿ ಎತ್ತರದ ಗೋಡೆ ಸೇರಿದಂತೆ ಜಾನುವಾರುಗಳಿಗೆ ಮೇವು ತಿನ್ನಲು ಗೋದಲಿ, ಕಾಂಕ್ರೀಟ್ ಬೆಡ್, ತಗಡಿನ ಶೀಟ್ ಹಾಕಿ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡಿದ್ದಾರೆ.</p>.<p>‘ಉದ್ಯೋಗ ಖಾತರಿ ಯೋಜನೆಯಡಿ ದನಗಳಿಗೆ ಕೊಟ್ಟಿಗೆ ನಿರ್ಮಿಸಿಕೊಂಡಿದ್ದೇವೆ. ಈಗಾಗಲೇ ಕೂಲಿ ಮೊತ್ತ ತಲಾ ₹7 ಸಾವಿರ ಬಂದಿದೆ. ಸಾಮಗ್ರಿ ಮೊತ್ತ ತಲಾ ₹50 ಸಾವಿರ ಬರಬೇಕು’ ಎಂದು ರೈತರಾದ ಬಸಪ್ಪ ಮತ್ತು ಗೋವಿಂದ ಹೇಳಿದರು.</p>.<p>‘ವೈಯಕ್ತಿಕ ಕಾಮಗಾರಿಗಳ ಅನುದಾನದಡಿ ಉತ್ತಮವಾದ ಜಾನುವಾರು ಕೊಟ್ಟಿಗೆ ನಿರ್ಮಾಣದಿಂದ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಪವಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>