<p><strong>ದೇವದುರ್ಗ:</strong> ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ತಾಲ್ಲೂಕು ಪಂಚಾಯಿತಿಯ 19 ಹೊರಗುತ್ತಿಗೆ ನೌಕರರನ್ನು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜುಲೈ 21ರಂದು ಸೇವೆಯಿಂದ ಬಿಡುಗಡೆ ಮಾಡಿದ್ದಾರೆ.</p>.<p>ತಾಲ್ಲೂಕಿನ ನರೇಗಾ ಯೋಜನೆಯಡಿ 2020-21, 2021-22, 2022-23ರವರೆಗೆ ನಡೆದ ಕಾಮಗಾರಿಗಳಲ್ಲಿ ಕಾಮಗಾರಿ ಅನುಷ್ಠಾನಗೊಳಿಸದೆ ₹83.09 ಲಕ್ಷ ಪಾವತಿ, ಕೆಟಿಪಿಪಿ ನಿಯಮ ಉಲ್ಲಂಘಿಸಿ ಒಂದೇ ವೇಂಡರ್ಗೆ ₹103.35 ಕೋಟಿ ಪಾವತಿ, ವೈಯಕ್ತಿಕ ಕಾಮಗಾರಿ ಕೈಗೊಂಡ ಫಲಾನುಭವಿಗಳಿಗೆ ಪಾವತಿಸದ ₹3.36 ಕೋಟಿ, ಅಳತೆ ಪುಸ್ತಕ ದಾಖಲಿಸದೆ ₹35.22ಕೋಟಿ, ಚೇಕ್ ಮೇಜರ್ ಮೆಂಟ್ ಮಾಡದೆ ₹118.77 ಕೋಟಿ ಹಣ ಪಾವತಿ, ಸರ್ಕಾರಕ್ಕೆ ಪಾವತಿಸಬೇಕಾದ ತೆರಿಗೆ ₹11.29 ಕೋಟಿ ಹಣ ದುರುಪಯೋಗಕ್ಕೆ ತಾಂತ್ರಿಕ ಸಿಬ್ಬಂದಿ ಸಹಕರಿಸಿ ಹಣ ದುರ್ಬಳಕೆ ಮಾಡಿಕೊಂಡ ಆದರದ ಮೇಲೆ ಈ ಸಿಬ್ಬಂದಿಯ ಸೇವೆಯನ್ನು ರದ್ದುಗೊಳಿಸಿ ಮಾನವ ಸಂಪನ್ಮೂಲ ಒದಗಿಸಿದ ಸಂಸ್ಥೆಗೆ ಸೇವೆಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ ಆದೇಶ ಮಾಡಿದ್ದಾರೆ.</p>.<p>2023 ನವೆಂಬರ್ನಲ್ಲಿ ತಾಲ್ಲೂಕಿನ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದ್ದ 33 ಪಿಡಿಒಗಳು, ಇಒ, ಮತ್ತು ಎಡಿ (ಗ್ರಾ ಉ) ಅಮಾನತು ಮಾಡಿ ಇಒ ಮತ್ತು ಎಡಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ತಾಲ್ಲೂಕು ಪಂಚಾಯಿತಿಯ 19 ಹೊರಗುತ್ತಿಗೆ ನೌಕರರನ್ನು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜುಲೈ 21ರಂದು ಸೇವೆಯಿಂದ ಬಿಡುಗಡೆ ಮಾಡಿದ್ದಾರೆ.</p>.<p>ತಾಲ್ಲೂಕಿನ ನರೇಗಾ ಯೋಜನೆಯಡಿ 2020-21, 2021-22, 2022-23ರವರೆಗೆ ನಡೆದ ಕಾಮಗಾರಿಗಳಲ್ಲಿ ಕಾಮಗಾರಿ ಅನುಷ್ಠಾನಗೊಳಿಸದೆ ₹83.09 ಲಕ್ಷ ಪಾವತಿ, ಕೆಟಿಪಿಪಿ ನಿಯಮ ಉಲ್ಲಂಘಿಸಿ ಒಂದೇ ವೇಂಡರ್ಗೆ ₹103.35 ಕೋಟಿ ಪಾವತಿ, ವೈಯಕ್ತಿಕ ಕಾಮಗಾರಿ ಕೈಗೊಂಡ ಫಲಾನುಭವಿಗಳಿಗೆ ಪಾವತಿಸದ ₹3.36 ಕೋಟಿ, ಅಳತೆ ಪುಸ್ತಕ ದಾಖಲಿಸದೆ ₹35.22ಕೋಟಿ, ಚೇಕ್ ಮೇಜರ್ ಮೆಂಟ್ ಮಾಡದೆ ₹118.77 ಕೋಟಿ ಹಣ ಪಾವತಿ, ಸರ್ಕಾರಕ್ಕೆ ಪಾವತಿಸಬೇಕಾದ ತೆರಿಗೆ ₹11.29 ಕೋಟಿ ಹಣ ದುರುಪಯೋಗಕ್ಕೆ ತಾಂತ್ರಿಕ ಸಿಬ್ಬಂದಿ ಸಹಕರಿಸಿ ಹಣ ದುರ್ಬಳಕೆ ಮಾಡಿಕೊಂಡ ಆದರದ ಮೇಲೆ ಈ ಸಿಬ್ಬಂದಿಯ ಸೇವೆಯನ್ನು ರದ್ದುಗೊಳಿಸಿ ಮಾನವ ಸಂಪನ್ಮೂಲ ಒದಗಿಸಿದ ಸಂಸ್ಥೆಗೆ ಸೇವೆಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ ಆದೇಶ ಮಾಡಿದ್ದಾರೆ.</p>.<p>2023 ನವೆಂಬರ್ನಲ್ಲಿ ತಾಲ್ಲೂಕಿನ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಿದ್ದ 33 ಪಿಡಿಒಗಳು, ಇಒ, ಮತ್ತು ಎಡಿ (ಗ್ರಾ ಉ) ಅಮಾನತು ಮಾಡಿ ಇಒ ಮತ್ತು ಎಡಿ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>