<p><strong>ಮಾನ್ವಿ</strong>: ‘ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ನಮ್ಮ ಪರಂಪರೆ, ಬಸವಾದಿ ಶರಣರ ಚಿಂತನೆಗಳ ಬಗ್ಗೆ ತಿಳಿಸುವ ಮೂಲಕ ಅವರನ್ನು ಉತ್ತಮ ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಧ್ಯಾನ ಮಂದಿರದ ಆವರಣದಲ್ಲಿ ಕಲ್ಮಠದ ಗಾರಿಗೆ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಪ್ರಭುಲಿಂಗ ಲೀಲೆ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಪ್ರಥಮ ಶೂನ್ಯ ಪೀಠಾಧ್ಯಕ್ಷರಾಗಿ ಅಲ್ಲಮಪ್ರಭು ದೇವರು ಸಮಾಜದಲ್ಲಿನ ಎಲ್ಲಾ ಕಾಯಕ ಬಂಧುಗಳನ್ನು ಬಸವಣ್ಣನವರೊಂದಿಗೆ ಒಟ್ಟುಗೂಡಿಸಿ ಶರಣನಾಡಿನ ಪರಿಕಲ್ಪನೆ, ಕಾಯಕ, ದಾಸೋಹದ ಮಹತ್ವದ ಬಗ್ಗೆ ಜನಜಾಗೃತಿ ಮೂಡಿಸಿದರು’ ಎಂದರು.</p>.<p>ರುದ್ರಯ್ಯಸ್ವಾಮಿ ಮದ್ಲಾಪುರ ಪ್ರಭುಲಿಂಗ ಲೀಲೆ ಕುರಿತು ಪ್ರವಚನ ನೀಡಿದರು. ನಾ.ಮ.ಜಗದೀಶ್ ಸಂಗೀತ ನೀಡಿದರು. ಸಿದ್ದಯ್ಯಸ್ವಾಮಿ ಮದ್ಲಾಪುರ್ ತಬಲಾ ಸಾಥ್ ನೀಡಿದರು.</p>.<p>ಮಾನ್ವಿಯ ಎಲ್.ಎಂ.ಜಿ.ಎಸ್ ಫ್ರೌಡಶಾಲೆಯ ವಿದ್ಯಾರ್ಥಿಗಳು ಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.</p>.<p>ಕಲ್ಮಠದ ವಿರೂಪಾಕ್ಷ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ಅಭಿನವ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಶಂಕರಯ್ಯಸ್ವಾಮಿ ಸುವರ್ಣಗಿರಿಮಠ, ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಹರಿಹರ ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ</strong>: ‘ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ನಮ್ಮ ಪರಂಪರೆ, ಬಸವಾದಿ ಶರಣರ ಚಿಂತನೆಗಳ ಬಗ್ಗೆ ತಿಳಿಸುವ ಮೂಲಕ ಅವರನ್ನು ಉತ್ತಮ ಮಾರ್ಗದಲ್ಲಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಧ್ಯಾನ ಮಂದಿರದ ಆವರಣದಲ್ಲಿ ಕಲ್ಮಠದ ಗಾರಿಗೆ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಪ್ರಭುಲಿಂಗ ಲೀಲೆ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಪ್ರಥಮ ಶೂನ್ಯ ಪೀಠಾಧ್ಯಕ್ಷರಾಗಿ ಅಲ್ಲಮಪ್ರಭು ದೇವರು ಸಮಾಜದಲ್ಲಿನ ಎಲ್ಲಾ ಕಾಯಕ ಬಂಧುಗಳನ್ನು ಬಸವಣ್ಣನವರೊಂದಿಗೆ ಒಟ್ಟುಗೂಡಿಸಿ ಶರಣನಾಡಿನ ಪರಿಕಲ್ಪನೆ, ಕಾಯಕ, ದಾಸೋಹದ ಮಹತ್ವದ ಬಗ್ಗೆ ಜನಜಾಗೃತಿ ಮೂಡಿಸಿದರು’ ಎಂದರು.</p>.<p>ರುದ್ರಯ್ಯಸ್ವಾಮಿ ಮದ್ಲಾಪುರ ಪ್ರಭುಲಿಂಗ ಲೀಲೆ ಕುರಿತು ಪ್ರವಚನ ನೀಡಿದರು. ನಾ.ಮ.ಜಗದೀಶ್ ಸಂಗೀತ ನೀಡಿದರು. ಸಿದ್ದಯ್ಯಸ್ವಾಮಿ ಮದ್ಲಾಪುರ್ ತಬಲಾ ಸಾಥ್ ನೀಡಿದರು.</p>.<p>ಮಾನ್ವಿಯ ಎಲ್.ಎಂ.ಜಿ.ಎಸ್ ಫ್ರೌಡಶಾಲೆಯ ವಿದ್ಯಾರ್ಥಿಗಳು ಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.</p>.<p>ಕಲ್ಮಠದ ವಿರೂಪಾಕ್ಷ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ಅಭಿನವ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಶಂಕರಯ್ಯಸ್ವಾಮಿ ಸುವರ್ಣಗಿರಿಮಠ, ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಹರಿಹರ ಪಾಟೀಲ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>