<p><strong>ಸಿಂಧನೂರು:</strong> ಗುರುವಾರ ನಗರಕ್ಕೆ ಆಗಮಿಸಿದ್ದ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ತಾಲ್ಲೂಕು ಘಟಕದಿಂದ 350ಕ್ಕೂ ಅಧಿಕ ಟ್ರ್ಯಾಕ್ಟರ್ ರ್ಯಾಲಿಯೊಂದಿಗೆ ಅದ್ದೂರಿ ರೋಡ್ ಶೋ ನಡೆಸಲಾಯಿತು.</p>.<p>ಕೆಲ ರೈತರು ಟ್ರ್ಯಾಕ್ಟರ್ನಲ್ಲಿ ತುಂಬಿಕೊಂಡು ಬಂದಿದ್ದ ಜೋಳದ ಚೀಲಗಳನ್ನು ನೆಲಕ್ಕೆ ಸುರಿಯುವ ಮೂಲಕ ಜೋಳ ಬೆಳೆಗಾರರ ಪರಿಸ್ಥಿತಿಯನ್ನು ನಿಖಿಲ್ ಕುಮಾರಸ್ವಾಮಿ ಗಮನಕ್ಕೆ ತಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವುದು ಮೂಗಿಗೆ ತುಪ್ಪ ಸವರುವ ಕೆಲಸ ಹೊರತು ರೈತರ ಬಗ್ಗೆ ಕಾಳಜಿ ಅಲ್ಲ’ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿದರು.</p>.<p>ರೋಡ್ ಶೋ ಗಂಗಾವತಿ ರಸ್ತೆಯ ಮೂಲ ಕಮ್ಮವಾರಿ ಕಲ್ಯಾಣ ಮಂಟಪಕ್ಕೆ ತಲುಪಿತು. ಕುಷ್ಟಗಿ ಮತ್ತು ಗಂಗಾವತಿ ರಸ್ತೆಗಳಲ್ಲಿ ಸುಮಾರು 2 ತಾಸುಗಳ ಕಾಲ ವಾಹನಗಳ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಯಿತು. ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು:</strong> ಗುರುವಾರ ನಗರಕ್ಕೆ ಆಗಮಿಸಿದ್ದ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ತಾಲ್ಲೂಕು ಘಟಕದಿಂದ 350ಕ್ಕೂ ಅಧಿಕ ಟ್ರ್ಯಾಕ್ಟರ್ ರ್ಯಾಲಿಯೊಂದಿಗೆ ಅದ್ದೂರಿ ರೋಡ್ ಶೋ ನಡೆಸಲಾಯಿತು.</p>.<p>ಕೆಲ ರೈತರು ಟ್ರ್ಯಾಕ್ಟರ್ನಲ್ಲಿ ತುಂಬಿಕೊಂಡು ಬಂದಿದ್ದ ಜೋಳದ ಚೀಲಗಳನ್ನು ನೆಲಕ್ಕೆ ಸುರಿಯುವ ಮೂಲಕ ಜೋಳ ಬೆಳೆಗಾರರ ಪರಿಸ್ಥಿತಿಯನ್ನು ನಿಖಿಲ್ ಕುಮಾರಸ್ವಾಮಿ ಗಮನಕ್ಕೆ ತಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವುದು ಮೂಗಿಗೆ ತುಪ್ಪ ಸವರುವ ಕೆಲಸ ಹೊರತು ರೈತರ ಬಗ್ಗೆ ಕಾಳಜಿ ಅಲ್ಲ’ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿದರು.</p>.<p>ರೋಡ್ ಶೋ ಗಂಗಾವತಿ ರಸ್ತೆಯ ಮೂಲ ಕಮ್ಮವಾರಿ ಕಲ್ಯಾಣ ಮಂಟಪಕ್ಕೆ ತಲುಪಿತು. ಕುಷ್ಟಗಿ ಮತ್ತು ಗಂಗಾವತಿ ರಸ್ತೆಗಳಲ್ಲಿ ಸುಮಾರು 2 ತಾಸುಗಳ ಕಾಲ ವಾಹನಗಳ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಯಿತು. ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>