<p><strong>ಮಾನ್ವಿ: </strong>ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಗ್ರಾಮದ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದೆ.</p>.<p>ಆರು ತಿಂಗಳ ಹಿಂದೆ ಗ್ರಾಮದ ಬೆಟ್ಟದಲ್ಲಿ ಚಿರತೆ ಕಂಡ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಟ್ಟದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬೆಟ್ಟದಲ್ಲಿ ಎರಡು ಚಿರತೆಗಳು ವಾಸಿಸುತ್ತಿವೆ ಎನ್ನುವ ಊಹಾಪೋಹಗಳು ಹಬ್ಬಿದ್ದವು.</p>.<p>ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ ನಾಯಕ ಮತ್ತು ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿಯಲು ನಿರಂತರ ಪ್ರಯತ್ನ ನಡೆಸಿದ್ದರೂ, ಅವರಿಗೆ ಚಿರತೆ ಪ್ರತ್ಯಕ್ಷವಾಗಿ ಕಂಡಿರಲಿಲ್ಲ. ಆದರೂ ಶೋಧ ಕಾರ್ಯಾಚರಣೆ ಮುಂದುವರಿಸಿದ್ದರು.</p>.<p>ಇದೇ ಮೊದಲ ಬಾರಿಗೆ ಚಿರತೆ ಅರಣ್ಯ ಇಲಾಖೆಯ ಸಿಬ್ಬಂದಿಯ ಕಣ್ಣಿಗೆ ಬಿದ್ದಿದೆ. ಈ ಕುರಿತು ಅರಣ್ಯ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.</p>.<p>ಸ್ಥಳೀಯ ವನ್ಯಜೀವಿ ತಜ್ಞ ಸಲಾವುದ್ದೀನ್, ಹಿರಿಯ ಛಾಯಾಗ್ರಾಹಕ ಜಗನ್ನಾಥ ಚೌದರಿ ಮತ್ತಿತರರು ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಜತೆಗೂಡಿ ಬೆಟ್ಟದಲ್ಲಿ ಚಿರತೆಯ ವಾಸಸ್ಥಳದ ಶೋಧ ಕಾರ್ಯ ನಡೆಸಿದರು.</p>.<p>ಈ ಸಂದರ್ಭದಲ್ಲಿ ಛಾಯಾಗ್ರಹಕ ಜಗನ್ನಾಥ ಚೌದರಿ ಅವರು ಬೆಟ್ಟದ ತುದಿಯಲ್ಲಿ ಚಿರತೆ ಇರುವ ದೃಶ್ಯವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೆಟ್ಟದಲ್ಲಿ ಚಿರತೆ ಇರುವ ಸುದ್ದಿ ಹರಡುತ್ತಲೇ ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಮಾತನಾಡಿ, ‘ನೀರಮಾನ್ವಿ ಗ್ರಾಮದ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಚಿರತೆ ಸೆರೆ ಹಿಡಿಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು. ಗ್ರಾಮಸ್ಥರು ಬೆಟ್ಟದ ಕಡೆಗೆ ತೆರಳದಂತೆ ತಡೆಯಲು ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಿ ಜಾಗೃತಿ ಮೂಡಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: </strong>ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ಸಂದರ್ಭದಲ್ಲಿ ಗ್ರಾಮದ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದೆ.</p>.<p>ಆರು ತಿಂಗಳ ಹಿಂದೆ ಗ್ರಾಮದ ಬೆಟ್ಟದಲ್ಲಿ ಚಿರತೆ ಕಂಡ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಟ್ಟದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಬೆಟ್ಟದಲ್ಲಿ ಎರಡು ಚಿರತೆಗಳು ವಾಸಿಸುತ್ತಿವೆ ಎನ್ನುವ ಊಹಾಪೋಹಗಳು ಹಬ್ಬಿದ್ದವು.</p>.<p>ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ ನಾಯಕ ಮತ್ತು ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿಯಲು ನಿರಂತರ ಪ್ರಯತ್ನ ನಡೆಸಿದ್ದರೂ, ಅವರಿಗೆ ಚಿರತೆ ಪ್ರತ್ಯಕ್ಷವಾಗಿ ಕಂಡಿರಲಿಲ್ಲ. ಆದರೂ ಶೋಧ ಕಾರ್ಯಾಚರಣೆ ಮುಂದುವರಿಸಿದ್ದರು.</p>.<p>ಇದೇ ಮೊದಲ ಬಾರಿಗೆ ಚಿರತೆ ಅರಣ್ಯ ಇಲಾಖೆಯ ಸಿಬ್ಬಂದಿಯ ಕಣ್ಣಿಗೆ ಬಿದ್ದಿದೆ. ಈ ಕುರಿತು ಅರಣ್ಯ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.</p>.<p>ಸ್ಥಳೀಯ ವನ್ಯಜೀವಿ ತಜ್ಞ ಸಲಾವುದ್ದೀನ್, ಹಿರಿಯ ಛಾಯಾಗ್ರಾಹಕ ಜಗನ್ನಾಥ ಚೌದರಿ ಮತ್ತಿತರರು ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಜತೆಗೂಡಿ ಬೆಟ್ಟದಲ್ಲಿ ಚಿರತೆಯ ವಾಸಸ್ಥಳದ ಶೋಧ ಕಾರ್ಯ ನಡೆಸಿದರು.</p>.<p>ಈ ಸಂದರ್ಭದಲ್ಲಿ ಛಾಯಾಗ್ರಹಕ ಜಗನ್ನಾಥ ಚೌದರಿ ಅವರು ಬೆಟ್ಟದ ತುದಿಯಲ್ಲಿ ಚಿರತೆ ಇರುವ ದೃಶ್ಯವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೆಟ್ಟದಲ್ಲಿ ಚಿರತೆ ಇರುವ ಸುದ್ದಿ ಹರಡುತ್ತಲೇ ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಮಾತನಾಡಿ, ‘ನೀರಮಾನ್ವಿ ಗ್ರಾಮದ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಚಿರತೆ ಸೆರೆ ಹಿಡಿಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು. ಗ್ರಾಮಸ್ಥರು ಬೆಟ್ಟದ ಕಡೆಗೆ ತೆರಳದಂತೆ ತಡೆಯಲು ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಿ ಜಾಗೃತಿ ಮೂಡಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>