ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಮಾತನಾಡಿ, ‘ನೀರಮಾನ್ವಿ ಗ್ರಾಮದ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಚಿರತೆ ಸೆರೆ ಹಿಡಿಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು. ಗ್ರಾಮಸ್ಥರು ಬೆಟ್ಟದ ಕಡೆಗೆ ತೆರಳದಂತೆ ತಡೆಯಲು ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಿ ಜಾಗೃತಿ ಮೂಡಿಸಲಾಗಿದೆ’ ಎಂದು ತಿಳಿಸಿದ್ದಾರೆ.