ರಾಯಚೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಂದು ಎಕರೆಗೆ 7.5 ಕ್ವಿಂಟಲ್ ತೊಗರಿ ಖರೀದಿಸಲಾಗುವುದು. ಇದಕ್ಕೆ ಯಾವುದೇ ಮಿತಿ ಇರುವುದಿಲ್ಲ ಎಂದು ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷಜಯವಂತರಾವ್ ಪತಂಗೆ ತಿಳಿಸಿದ್ದಾರೆ.
ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಖರೀದಿ ಪ್ರಮಾಣದ ಮಿತಿಯನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಅಲ್ಲದೆ, ರೈತರಿಂದ ತೊಗರಿ ಖರೀದಿಸುವ ನೋಂದಣಿ ಕಾಲಾವಧಿಯನ್ನು ಫೆಬ್ರುವರಿ 28 ರವರೆಗೂ ವಿಸ್ತರಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.