ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಬೆಂಬಲವಿಲ್ಲ: ಮಹಾವೀರ

Last Updated 19 ಏಪ್ರಿಲ್ 2019, 9:39 IST
ಅಕ್ಷರ ಗಾತ್ರ

ರಾಯಚೂರು: ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್‌ ಸಂಸದ ಬಿ.ವಿ. ನಾಯಕ ಅವರಿಂದ ಯಾವುದೇ ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಈ ಸಲ ಕಾಂಗ್ರೆಸ್‌ಗೆ ಸಂಘದ ಬೆಂಬಲ ನೀಡದಿರಲು ಸಂಘದಿಂದ ತೀರ್ಮಾನಿಸಲಾಗಿದೆ ಎಂದು ರಾಯಚೂರು ನಗರದ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಮಹಾವೀರ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಸಂಸದರಾಗಿ ಎಷ್ಟು ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂಬುದನ್ನು ಬಹಿರಂಗ ಮಾಡಲಿ ಎಂದರು.

ಜನರು ನೀರು, ರಸ್ತೆಗಾಗಿ ಪ್ರತಿಭಟನೆ ಮಾಡಿದರೂ ಸ್ಪಂದಿಸುವುದಿಲ್ಲ. ಹೊಸ ವಿಶ್ವವಿದ್ಯಾಲಯದ ಸ್ಥಾಪಿಸಲು ಯಾವುದೇ ಕೊಡುಗೆಯನ್ನು ಕಾಂಗ್ರೆಸ್ ನೀಡಿಲ್ಲ.

ಎಸ್‌ಸಿ, ಎಸ್‌ಟಿ ವ್ಯಾಪಾರಿಗಳಿಗೆ ಅನ್ಯಾಯವಾದರೂ ಕಾಂಗ್ರೆಸ್‌ ಸಂಸದರು ಬೆಂಬಲಿಸಿ ಮಾತನಾಡುವುದಿಲ್ಲ ಎಂದು ಹೇಳಿದರು.

ಮುಖಂಡರಾದ ಮಹ್ಮದ್ ಶಾಹಖಾನ್, ಪ್ರಶಾಂತ, ಪ್ರಭುನಾಯಕ, ರಮೇಶನಾಯಕ, ಎಸ್.ಕೆ.ಖಾನ್, ರಾಜಪ್ಪ, ಡಿ.ಸಿ.ಭೀಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT