ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದಲ್ಲಿ ಅಸಮಾಧಾನವಿಲ್ಲ: ಶ್ರೀರಾಮುಲು

Last Updated 22 ಆಗಸ್ಟ್ 2019, 13:00 IST
ಅಕ್ಷರ ಗಾತ್ರ

ರಾಯಚೂರು: ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಮೂರು ವರ್ಷ ಸರ್ಕಾರವು ಸುಗಮವಾಗಿ ಆಡಳಿತ ನಡೆಸಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ನಗರದಲ್ಲಿ ಸಂಸದರ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಉಮೇಶ ಕತ್ತಿ, ರೇಣುಕಾಚಾರ್ಯ ಸೇರಿದಂತೆ ಕೆಲವರೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಾತುಕತೆ ನಡೆಸಲಿದ್ದಾರೆ. ಅಸಮಾಧಾನವೆಲ್ಲ ದೂರವಾಗಲಿದೆ ಎಂದು ತಿಳಿಸಿದರು.

ಸಚಿವ ಸ್ಥಾನಗಳ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ನೆರೆ ಹಾವಳಿ ಪರಿಸ್ಥಿತಿ ಅವಲೋಕನ ಮತ್ತು ಪರಿಹಾರ ವಿತರಣೆ ಕಾರ್ಯ ತ್ವರಿತವಾಗಿ ನಡೆಯುತ್ತಿದೆ. ಕೇಂದ್ರದಿಂದ ಅನುದಾನ ಬರಲಿದೆ. ರಾಜ್ಯದಲ್ಲಿ ಆಗಿರುವ ಹಾನಿ ಬಗ್ಗೆ ವರದಿ ಸಲ್ಲಿಸಲು ಕೇಂದ್ರಕ್ಕೆ ತಂಡವೊಂದನ್ನು ಕಳುಹಿಸಲಾಗುತ್ತಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT