ತಾಲ್ಲೂಕಿನ ಗಾಂಧಿನಗರದಲ್ಲಿ ಭಾನುವಾರ ನಡೆದ ಲಕ್ಷ ನರ್ಮದ ಲಿಂಗ ಸಹಿತ ಆತ್ಮಲಿಂಗ ಪ್ರತಿಷ್ಠಾಪನಾ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ‘ಸಿಂಧನೂರಿನಲ್ಲಿ ನನಗೆ ಸಾಕಷ್ಟು ಗೆಳೆಯರಿದ್ದಾರೆ. ರಾಜಕೀಯ ಉದ್ದೇಶದಿಂದ ಪ್ರವಾಸ ಮಾಡುತ್ತಿಲ್ಲ. ಚುನಾವಣೆ ಬಗ್ಗೆ ನಿರ್ಧರಿಸಿಲ್ಲ. ವರಿಷ್ಠರು ಒತ್ತಡ ಹೇರಿ, ಟಿಕೆಟ್ ನೀಡಿದರೆ ಆಗ ಯೋಚಿಸುವೆ’ ಎಂದರು.