ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರಿನಿಂದ ಸ್ಪರ್ಧಿಸುವರೇ ಜನಾರ್ದನ ರೆಡ್ಡಿ?

Last Updated 9 ಮೇ 2022, 2:21 IST
ಅಕ್ಷರ ಗಾತ್ರ

ಸಿಂಧನೂರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.

ತಾಲ್ಲೂಕಿನ ಗಾಂಧಿನಗರದಲ್ಲಿ ಭಾನುವಾರ ನಡೆದ ಲಕ್ಷ ನರ್ಮದ ಲಿಂಗ ಸಹಿತ ಆತ್ಮಲಿಂಗ ಪ್ರತಿಷ್ಠಾಪನಾ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ‘ಸಿಂಧನೂರಿನಲ್ಲಿ ನನಗೆ ಸಾಕಷ್ಟು ಗೆಳೆಯರಿದ್ದಾರೆ. ರಾಜಕೀಯ ಉದ್ದೇಶದಿಂದ ಪ್ರವಾಸ ಮಾಡುತ್ತಿಲ್ಲ. ಚುನಾವಣೆ ಬಗ್ಗೆ ನಿರ್ಧರಿಸಿಲ್ಲ. ವರಿಷ್ಠರು ಒತ್ತಡ ಹೇರಿ, ಟಿಕೆಟ್ ನೀಡಿದರೆ ಆಗ ಯೋಚಿಸುವೆ’ ಎಂದರು.

‘ಸಿಂಧನೂರು ವಿಧಾನಸಭಾ ಕ್ಷೇತ್ರ ದಿಂದ ನಾನು ಸ್ಪರ್ಧಿಸುವ ಕುರಿತು ಮಾಧ್ಯಮಗಳ ವರದಿ ಗಮನಿಸಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುವರು. ಪಕ್ಷದ ಮುಖಂಡರು ಯಾರಿಗೆ ಟಿಕೆಟ್ ನೀಡುವುರೋ, ಅವರನ್ನು ಗೌರವಿಸುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT