‘ಎನ್ಆರ್ಬಿಸಿ 95 ವಿತರಣಾ ಕಾಲುವೆಯು 125 ಕಿಲೋ ಮೀಟರ್ ಹರಿಯುತ್ತದೆ. ಕಾಲುವೆ ಇನ್ನೂ ನಿರ್ಮಾಣ ಹಂತದಲ್ಲಿದ್ದು, ನೀರು ಹರಿಸುವ ಅಗತ್ಯ ಇರಲಿಲ್ಲ. ನೀರಾವರಿ ಇಲಾಖೆಯ ನಿರ್ಲಕ್ಷ್ಯದಿಂದ ಜಮೀನುಗಳು ಹಾಳಾಗಿವೆ. ಕೂಡಲೇ ಪರಿಹಾರ ಕೊಡದಿದ್ದರೆ, ಜಿಲ್ಲಾಧಿಕಾರಿ ಕಚೇರಿ ಎದುರು ನಷ್ಟದಲ್ಲಿರುವ ರೈತರೊಂದಿಗೆ ಉಪವಾಸ ಆರಂಭಿಸಬೇಕಾಗುತ್ತದೆ’ ಎಂದು ರೈತ ಮುಖಂಡ ಲಕ್ಷ್ಮಣಗೌಡ ಕಡಗಂದೊಡ್ಡಿ ಎಚ್ಚರಿಕೆ ನೀಡಿದ್ದಾರೆ.