<p><strong>ಲಿಂಗಸುಗೂರು</strong>: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದು ದೃಡಪಟ್ಟಿದ್ದರಿಂದ ಸೇವೆಯಿಂದ ಅಮಾನತು ಗೊಳಿಸಿ ಚುನಾವಣಾಧಿಕಾರಿ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ.</p><p>ರಾಯಚೂರು ಲೋಕಸಭಾ ವ್ಯಾಪ್ತಿ ಲಿಂಗಸುಗೂರು ತಾಲ್ಲೂಕು ಮುದಗಲ್ಲ ಹೋಬಳಿ ಮಟ್ಟದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಎಪ್.ಎಸ್.ಟಿ ತಂಡದಲ್ಲಿ ರಾಠೋಡ ಅವರನ್ನು ನಿಯೋಜಿಸಲಾಗಿತ್ತು.</p><p>ಏ. 5 ರಿಂದ ಏ.7 ಅವಧಿಯಲ್ಲಿ ಕರ್ತವ್ಯಕ್ಕೆ ಪೂರ್ವಾನುಮತಿ ಪಡೆಯದೆ ಗೈರು ಆಗಿದ್ದಾರೆ. ಈ ಸಂದರ್ಭದಲ್ಲಿ ಇಲಾಖೆ ಸಿಬ್ಬಂದಿ ನಿಯೋಜಿಸಿ ತಾವೆ ಕರ್ತವ್ಯ ನಿಭಾಯಿಸಿದ್ದಾಗಿ ತಪ್ಪು ವರದಿ ಸಲ್ಲಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ದೂರು ಸಲ್ಲಿಸಿತ್ತು.</p><p>ರಾಠೋಡ ಅವರು ಕಾರಣಕೇಳಿ ನೋಟಿಸ್ ಗೆ ಉತ್ತರಿಸಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಸಹಾಯಕ ಚುನಾವಣಾಧಿಕಾರಿ ವರದಿ, ತಪ್ಪೊಪ್ಪಿಗೆ ಅಂಶಗಳ ಮೇಲೆ ಪ್ರಜಾಪ್ರತಿನಿಧಿ ಕಾಯ್ದೆ 1951, ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957 ರಡಿ ಅಮಾನತ್ತು ಗೊಳಿಸಿದ್ದಾರೆ. ಈ ಅವಧಿಯಲ್ಲಿ ಜೀವನಾಧಾರ ಭತ್ಯ ಪಡೆಯಬಹುದು. ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಳ ಬಿಡುವಂತಿಲ್ಲ ಎಂದು ಏ.13 ರಂದು ಹೊರಡಿಸಿದ ಆದೇಶದಲ್ಲಿ ಕಟ್ಟಳೆ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದು ದೃಡಪಟ್ಟಿದ್ದರಿಂದ ಸೇವೆಯಿಂದ ಅಮಾನತು ಗೊಳಿಸಿ ಚುನಾವಣಾಧಿಕಾರಿ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ.</p><p>ರಾಯಚೂರು ಲೋಕಸಭಾ ವ್ಯಾಪ್ತಿ ಲಿಂಗಸುಗೂರು ತಾಲ್ಲೂಕು ಮುದಗಲ್ಲ ಹೋಬಳಿ ಮಟ್ಟದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಎಪ್.ಎಸ್.ಟಿ ತಂಡದಲ್ಲಿ ರಾಠೋಡ ಅವರನ್ನು ನಿಯೋಜಿಸಲಾಗಿತ್ತು.</p><p>ಏ. 5 ರಿಂದ ಏ.7 ಅವಧಿಯಲ್ಲಿ ಕರ್ತವ್ಯಕ್ಕೆ ಪೂರ್ವಾನುಮತಿ ಪಡೆಯದೆ ಗೈರು ಆಗಿದ್ದಾರೆ. ಈ ಸಂದರ್ಭದಲ್ಲಿ ಇಲಾಖೆ ಸಿಬ್ಬಂದಿ ನಿಯೋಜಿಸಿ ತಾವೆ ಕರ್ತವ್ಯ ನಿಭಾಯಿಸಿದ್ದಾಗಿ ತಪ್ಪು ವರದಿ ಸಲ್ಲಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ದೂರು ಸಲ್ಲಿಸಿತ್ತು.</p><p>ರಾಠೋಡ ಅವರು ಕಾರಣಕೇಳಿ ನೋಟಿಸ್ ಗೆ ಉತ್ತರಿಸಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಸಹಾಯಕ ಚುನಾವಣಾಧಿಕಾರಿ ವರದಿ, ತಪ್ಪೊಪ್ಪಿಗೆ ಅಂಶಗಳ ಮೇಲೆ ಪ್ರಜಾಪ್ರತಿನಿಧಿ ಕಾಯ್ದೆ 1951, ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957 ರಡಿ ಅಮಾನತ್ತು ಗೊಳಿಸಿದ್ದಾರೆ. ಈ ಅವಧಿಯಲ್ಲಿ ಜೀವನಾಧಾರ ಭತ್ಯ ಪಡೆಯಬಹುದು. ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಳ ಬಿಡುವಂತಿಲ್ಲ ಎಂದು ಏ.13 ರಂದು ಹೊರಡಿಸಿದ ಆದೇಶದಲ್ಲಿ ಕಟ್ಟಳೆ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>