ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಎಸ್ಡಿಎಂಸಿ ಅಧ್ಯಕ್ಷ ಶ್ರೀಶೈಲಗೌಡ, ‘ಮಹರ್ಷಿ ವಾಲ್ಮೀಕಿ ದಿನಾಚರಣೆಯಂದು ನಡೆದಿದ್ದ ಆಕಸ್ಮಿಕ ಘಟನೆ ಬಗ್ಗೆ ನೀಡಲಾದ ದೂರಿನನ್ವಯ ಮುಖ್ಯ ಶಿಕ್ಷಕರನ್ನು ತಾತ್ಕಾಲಿಕ ನಿಯೋಜನೆ ಆಧಾರದಲ್ಲಿ ಬೇರೆ ಶಾಲೆಗೆ ವರ್ಗಾಯಿಸಲಾಗಿದೆ. ಸದರಿ ಘಟನೆಯಲ್ಲಿ ಮುಖ್ಯ ಶಿಕ್ಷಕರು ಯಾವುದೇ ತಪ್ಪು ಮಾಡಿಲ್ಲ ಎಂದು ಮಕ್ಕಳ ಪಾಲಕರು ಹಾಗೂ ಎಸ್ಡಿ ಎಂಸಿ ಪದಾಧಿಕರಿಗಳು ಈಗಾಗಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ನಾಲ್ಕೈದು ವರ್ಷಗಳಿಂದ ಶಾಲೆಯಲ್ಲಿ ಶಿಕ್ಷಕರ ಕೊರತೆ, ಕಟ್ಟಡ, ಮೂಲಸೌಕರ್ಯ ಸೇರಿ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ ಈಗ ಏಕಾಏಕಿ ಮುಖ್ಯ ಶಿಕ್ಷಕರ ವರ್ಗಾವಣೆಗೆ ಮುಂದಾಗಿರುವುದು ಖಂಡನೀಯ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.