ಲಿಂಗಸುಗೂರು (ರಾಯಚೂರು): ದೇವರಭೂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 150 ಅಡಿ ಆಳದ ಕಣಿವೆಗೆ ಇಳಿದು ಜನರು ಕುಡಿಯುವ ನೀರು ತೆಗೆದುಕೊಳ್ಳುವ ಸಂಕಷ್ಟ ಸ್ಥಿತಿ ಇರುವ ಗಲಗಿನವರ ದೊಡ್ಡಿಗೆ ಅಧಿಕಾರಿಗಳ ತಂಡವು ಶನಿವಾರ ಭೇಟಿ ನೀಡಿದೆ. ನನೆಗುದಿಗೆ ಬಿದ್ದಿದ್ದ ನೀರೊದಗಿಸುವ ಪೈಪ್ಲೈನ್ ಕಾಮಗಾರಿಯನ್ನು ತುರ್ತಾಗಿ ಆರಂಭಿಸಿದ್ದಾರೆ.