<p><strong>ರಾಯಚೂರು: </strong>ಪರಿಸರ ಉಳಿಸಲು ಮುಂದಾಗಿರುವ ಪರಿಸರ ಪ್ರೇಮಿ ಈರಣ್ಣ ಕೋಸಗಿ ಅವರು ‘ಒಂದು ಕರೆ ಒಂದು ಸಸಿ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಕರೆ ಮಾಡಿದರೆ ಸಾಕು ಜನರು ಬಯಸುವ ಸ್ಥಳಕ್ಕೆ ಬಂದು ಸಸಿ ನೆಡುತ್ತಿದ್ದಾರೆ ಎಂದು ಯುವ ಸಾಹಿತಿ ಈರಣ್ಣ ಬೆಂಗಾಲಿ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇತಾಜಿ ನಗರದ ನಿವಾಸಿಯಾದ ಈರಣ್ಣ ಕೋಸಗಿಯವರು 13 ವರ್ಷಗಳಿಂದ ಸಸಿಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಸಾವಿರಾರು ಸಸಿಗಳನ್ನು ನೆಟ್ಟು ಹೆಮ್ಮರಗಳನ್ನಾಗಿ ಬೆಳೆಸಿ ಪರಿಸರ ಉಳಿಸಲು ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.</p>.<p>ನಗರ ವ್ಯಾಪ್ತಿಯಲ್ಲಿನ ಮನೆ, ಶಾಲೆ, ಕಾಲೇಜು ಹಾಗೂ ವಿವಿಧ ಕಚೇರಿಯ ಆವರಣದಲ್ಲಿ ಸಸಿಗಳನ್ನು ನಿರಂತರವಾಗಿ ನೆಡುವ ಸಲುವಾಗಿ ಈ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಸರಿಯಾಗಿ ಮಳೆಯಿಲ್ಲದೇ ಬರಗಾಲವಿದೆ. ಇದರಿಂದ ಮರಗಳ ನಾಶವಾಗುತ್ತಿವೆ. ಆದ್ದರಿಂದ ಹಸಿರುಮಯ ಮಾಡಲು ಸಸಿಗಳನ್ನು ನೆಟ್ಟು, ಪೋಷಿಸಬೇಕಾಗಿದೆ. ಇಲ್ಲದಿದ್ದರೆ ಉಳಿಗಾಲವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಪರಿಸರ ಪ್ರೇಮಿ ಈರಣ್ಣ ಕೋಸಗಿ ಮಾತನಾಡಿ, ಮಳೆಯಿಲ್ಲದ ಪರಿಣಾಮ ಅರಣ್ಯ ಪ್ರದೇಶದಲ್ಲಿ ನೆಟ್ಟ ಸಸಿಗಳಿಗೆ ಟ್ಯಾಂಕರ್ ಮೂಲಕ ನೀರು ಹರಿಸಿದರೂ, ಹಲವು ಗಿಡಗಳು ನಾಶವಾಗಿವೆ. ಸಂಬಂಧಿಸಿದ ಅಧಿಕಾರಿಗಳು ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಪರಿಸರ ಉಳಿಸಲು ಮುಂದಾಗಿರುವ ಪರಿಸರ ಪ್ರೇಮಿ ಈರಣ್ಣ ಕೋಸಗಿ ಅವರು ‘ಒಂದು ಕರೆ ಒಂದು ಸಸಿ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಕರೆ ಮಾಡಿದರೆ ಸಾಕು ಜನರು ಬಯಸುವ ಸ್ಥಳಕ್ಕೆ ಬಂದು ಸಸಿ ನೆಡುತ್ತಿದ್ದಾರೆ ಎಂದು ಯುವ ಸಾಹಿತಿ ಈರಣ್ಣ ಬೆಂಗಾಲಿ ಹೇಳಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇತಾಜಿ ನಗರದ ನಿವಾಸಿಯಾದ ಈರಣ್ಣ ಕೋಸಗಿಯವರು 13 ವರ್ಷಗಳಿಂದ ಸಸಿಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಸಾವಿರಾರು ಸಸಿಗಳನ್ನು ನೆಟ್ಟು ಹೆಮ್ಮರಗಳನ್ನಾಗಿ ಬೆಳೆಸಿ ಪರಿಸರ ಉಳಿಸಲು ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.</p>.<p>ನಗರ ವ್ಯಾಪ್ತಿಯಲ್ಲಿನ ಮನೆ, ಶಾಲೆ, ಕಾಲೇಜು ಹಾಗೂ ವಿವಿಧ ಕಚೇರಿಯ ಆವರಣದಲ್ಲಿ ಸಸಿಗಳನ್ನು ನಿರಂತರವಾಗಿ ನೆಡುವ ಸಲುವಾಗಿ ಈ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಸರಿಯಾಗಿ ಮಳೆಯಿಲ್ಲದೇ ಬರಗಾಲವಿದೆ. ಇದರಿಂದ ಮರಗಳ ನಾಶವಾಗುತ್ತಿವೆ. ಆದ್ದರಿಂದ ಹಸಿರುಮಯ ಮಾಡಲು ಸಸಿಗಳನ್ನು ನೆಟ್ಟು, ಪೋಷಿಸಬೇಕಾಗಿದೆ. ಇಲ್ಲದಿದ್ದರೆ ಉಳಿಗಾಲವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಪರಿಸರ ಪ್ರೇಮಿ ಈರಣ್ಣ ಕೋಸಗಿ ಮಾತನಾಡಿ, ಮಳೆಯಿಲ್ಲದ ಪರಿಣಾಮ ಅರಣ್ಯ ಪ್ರದೇಶದಲ್ಲಿ ನೆಟ್ಟ ಸಸಿಗಳಿಗೆ ಟ್ಯಾಂಕರ್ ಮೂಲಕ ನೀರು ಹರಿಸಿದರೂ, ಹಲವು ಗಿಡಗಳು ನಾಶವಾಗಿವೆ. ಸಂಬಂಧಿಸಿದ ಅಧಿಕಾರಿಗಳು ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>