ನಗರ ವ್ಯಾಪ್ತಿಯಲ್ಲಿನ ಮನೆ, ಶಾಲೆ, ಕಾಲೇಜು ಹಾಗೂ ವಿವಿಧ ಕಚೇರಿಯ ಆವರಣದಲ್ಲಿ ಸಸಿಗಳನ್ನು ನಿರಂತರವಾಗಿ ನೆಡುವ ಸಲುವಾಗಿ ಈ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಸರಿಯಾಗಿ ಮಳೆಯಿಲ್ಲದೇ ಬರಗಾಲವಿದೆ. ಇದರಿಂದ ಮರಗಳ ನಾಶವಾಗುತ್ತಿವೆ. ಆದ್ದರಿಂದ ಹಸಿರುಮಯ ಮಾಡಲು ಸಸಿಗಳನ್ನು ನೆಟ್ಟು, ಪೋಷಿಸಬೇಕಾಗಿದೆ. ಇಲ್ಲದಿದ್ದರೆ ಉಳಿಗಾಲವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.