ಗ್ರಾಮೀಣ ಭಾಗದಿಂದ ಹಾಗೂ ನಗರಗಳಲ್ಲಿ ತುರ್ತು ಕೆಲಸದ ಹೊರತಾಗಿ ಜನರು ಹೊರಬರುವುದನ್ನು ನಿಷೇಧಿಸಲಾಗಿದೆ. ಕೇವಲ ಅತಿ ಅಗತ್ಯ ದಿನಸಿ ವಸ್ತುಗಳನ್ನು ಮತ್ತು ತುರ್ತು ವೈದ್ಯಕೀಯ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಮಾತ್ರ ನಗರವ್ಯಾಪ್ತಿಯಲ್ಲಿ ಸಂಚರಿಸಲು ಅನುಮತಿ ಇದೆ. ಇದನ್ನು ಉಲ್ಲಂಘಿಸಿದರೆ ಸಾರ್ವಜನಿಕರು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.