<p><strong>ರಾಯಚೂರು</strong>: ಜಿಲ್ಲಾಧಿಕಾರಿ ನಿತೀಶ್ ಕೆ. ಜುಲೈ 16ರಂದು ನಗರದಲ್ಲಿನ ಒಪೆಕ್ ಆಸ್ಪತ್ರೆ ಟ್ರಾಮಾ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು.<br><br> ‘ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಕಟ್ಟಡ ನಿರ್ಮಾಣ ಕಾಮಗಾರಿಯ ವೇಗಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ವಿಶೇಷ ತಜ್ಞ ವೈದ್ಯರ ಜೊತೆಗೆ ಜಿಲ್ಲಾಧಿಕಾರಿಳು ಚರ್ಚೆ ನಡೆಸಿದರು.<br> ಇಲ್ಲಿಗೆ ಬರುವ ರೋಗಿಗಳಿಗೆ ಗುಣಮಟ್ಟದ ರೀತಿಯಲ್ಲಿ ಚಿಕಿತ್ಸೆ ಸಿಗಬೇಕು. ಜನರಿಗೆ ಎಲ್ಲ ರೀತಿಯಲ್ಲಿ ಅನುಕೂಲವಾಗುವ ಹಾಗೆ ಹೊಸ ವಿಭಾಗಗಳನ್ನು ಸಹ ಆರಂಭಿಸಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.</p>.<p>ಹೃದ್ರೋಗ ವಿಭಾಗ ಬಲಪಡಿಸಿ: ಇದೀಗ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ. ಹೀಗಾಗಿ ಜನತೆಗೆ ಸಕಾಲಕ್ಕೆ ಚಿಕಿತ್ಸೆ ದೊರೆಯುವಂತೆ ಒಪೆಕ್ ಆಸ್ಪತ್ರೆಯಲ್ಲಿನ ಹೃದ್ರೋಗ ವಿಭಾಗವನ್ನು ಬಲಪಡಿಸಲು ಕ್ರಮವಹಿಸಬೇಕು ಎಂದು ಡಾ.ಗೋಪಿನಾಥ ಅವರಿಗೆ ಸೂಚನೆ ನೀಡಿದರು.</p>.<p>ಒಪೆಕ್ ಆಸ್ಪತ್ರೆಯಲ್ಲಿ ಉತ್ತಮವಾದ ವೈದ್ಯಕೀಯ ಚಿಕಿತ್ಸೆ ಸಿಗುತ್ತಿದೆ ಎಂಬುದರ ಬಗ್ಗೆ ಜನತೆಗೆ ಮಾಹಿತಿ ರವಾನೆಯಾಗಬೇಕು. ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಸಂದರ್ಭದಲ್ಲಿ ಸರ್ಕಾರಿ ಅಥವಾ ಖಾಸಗಿ ವೈದ್ಯರು ರೋಗಿಯನ್ನು ಒಪೆಕ್ ಆಸ್ಪತ್ರೆಗೆ ಹೋಗುವಂತೆ ಸಲಹೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಆಸ್ಪತ್ರೆಯ ಹೊರಾಂಗಣದಲ್ಲಿ ಸಂಚರಿಸಿ ಆಸ್ಪತ್ರೆಯ ಉದ್ಯಾನ ವೀಕ್ಷಣೆ ನಡೆಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ವಿಶ್ರಾಂತಿಗೆ ಅನುಕೂಲವಾಗುವಂತೆ ಕೂಡಲು ಅಲ್ಲಲ್ಲಿ ಸಿಮೆಂಟ್ ಬೆಂಚ್ ಅಳವಡಿಸಿ ಉದ್ಯಾನವನವನ್ನು ಅಚ್ಚುಕಟ್ಟಾಗಿ ನಿರ್ಮಿಸಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ಒಪೆಕ್ ಆಸ್ಪತ್ರೆಯ ನಿರ್ದೇಶಕ ಡಾ.ರಮೇಶ ಬಿ ಎಚ್, ವಿಶೇಷ ಅಧಿಕಾರಿ ಡಾ.ರಮೇಶ ಸಿ ಸಾಗರ, ಒಪೆಕ್ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ನೀಲಪ್ರಭಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ವಿಜಯಶಂಕರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲಾಧಿಕಾರಿ ನಿತೀಶ್ ಕೆ. ಜುಲೈ 16ರಂದು ನಗರದಲ್ಲಿನ ಒಪೆಕ್ ಆಸ್ಪತ್ರೆ ಟ್ರಾಮಾ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು.<br><br> ‘ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಕಟ್ಟಡ ನಿರ್ಮಾಣ ಕಾಮಗಾರಿಯ ವೇಗಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ವಿಶೇಷ ತಜ್ಞ ವೈದ್ಯರ ಜೊತೆಗೆ ಜಿಲ್ಲಾಧಿಕಾರಿಳು ಚರ್ಚೆ ನಡೆಸಿದರು.<br> ಇಲ್ಲಿಗೆ ಬರುವ ರೋಗಿಗಳಿಗೆ ಗುಣಮಟ್ಟದ ರೀತಿಯಲ್ಲಿ ಚಿಕಿತ್ಸೆ ಸಿಗಬೇಕು. ಜನರಿಗೆ ಎಲ್ಲ ರೀತಿಯಲ್ಲಿ ಅನುಕೂಲವಾಗುವ ಹಾಗೆ ಹೊಸ ವಿಭಾಗಗಳನ್ನು ಸಹ ಆರಂಭಿಸಲು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.</p>.<p>ಹೃದ್ರೋಗ ವಿಭಾಗ ಬಲಪಡಿಸಿ: ಇದೀಗ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ. ಹೀಗಾಗಿ ಜನತೆಗೆ ಸಕಾಲಕ್ಕೆ ಚಿಕಿತ್ಸೆ ದೊರೆಯುವಂತೆ ಒಪೆಕ್ ಆಸ್ಪತ್ರೆಯಲ್ಲಿನ ಹೃದ್ರೋಗ ವಿಭಾಗವನ್ನು ಬಲಪಡಿಸಲು ಕ್ರಮವಹಿಸಬೇಕು ಎಂದು ಡಾ.ಗೋಪಿನಾಥ ಅವರಿಗೆ ಸೂಚನೆ ನೀಡಿದರು.</p>.<p>ಒಪೆಕ್ ಆಸ್ಪತ್ರೆಯಲ್ಲಿ ಉತ್ತಮವಾದ ವೈದ್ಯಕೀಯ ಚಿಕಿತ್ಸೆ ಸಿಗುತ್ತಿದೆ ಎಂಬುದರ ಬಗ್ಗೆ ಜನತೆಗೆ ಮಾಹಿತಿ ರವಾನೆಯಾಗಬೇಕು. ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಸಂದರ್ಭದಲ್ಲಿ ಸರ್ಕಾರಿ ಅಥವಾ ಖಾಸಗಿ ವೈದ್ಯರು ರೋಗಿಯನ್ನು ಒಪೆಕ್ ಆಸ್ಪತ್ರೆಗೆ ಹೋಗುವಂತೆ ಸಲಹೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಆಸ್ಪತ್ರೆಯ ಹೊರಾಂಗಣದಲ್ಲಿ ಸಂಚರಿಸಿ ಆಸ್ಪತ್ರೆಯ ಉದ್ಯಾನ ವೀಕ್ಷಣೆ ನಡೆಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ವಿಶ್ರಾಂತಿಗೆ ಅನುಕೂಲವಾಗುವಂತೆ ಕೂಡಲು ಅಲ್ಲಲ್ಲಿ ಸಿಮೆಂಟ್ ಬೆಂಚ್ ಅಳವಡಿಸಿ ಉದ್ಯಾನವನವನ್ನು ಅಚ್ಚುಕಟ್ಟಾಗಿ ನಿರ್ಮಿಸಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ಒಪೆಕ್ ಆಸ್ಪತ್ರೆಯ ನಿರ್ದೇಶಕ ಡಾ.ರಮೇಶ ಬಿ ಎಚ್, ವಿಶೇಷ ಅಧಿಕಾರಿ ಡಾ.ರಮೇಶ ಸಿ ಸಾಗರ, ಒಪೆಕ್ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ನೀಲಪ್ರಭಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ವಿಜಯಶಂಕರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>