<p><strong>ರಾಯಚೂರು:</strong> ಇಂಟಿಗ್ರೇಟೆಡ್ ಕೋರ್ಸ್ಗಳ ಹೆಸರಿನಲ್ಲಿ ಖಾಸಗಿ ಪದವಿ ಪೂರ್ವ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್ಎಸ್ಒ) ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.</p>.<p>ರಾಜ್ಯದ ಖಾಸಗಿ ಪದವಿ ಪೂರ್ವ ಕಾಲೇಜುಗಳು ನೀಟ್, ಸಿಇಟಿ, ಜೆಇಇ ಒದಗಿಸಲಾದ ಕೋಚಿಂಗ್ ತರಗತಿಗಳ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಶೇ 100ರಷ್ಟು ಶುಲ್ಕ ಹೆಚ್ಚಳ ಮಾಡಿದೆ. ಕರ್ನಾಟಕ ಶಿಕ್ಷಣ ಕಾಯಿದೆ - 1983ರ ಅಡಿಯಲ್ಲಿ, ಶುಲ್ಕ ಹೆಚ್ಚಳ ತಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ತಿಳಿಸಿದರು.</p>.<p>ಕಾಲೇಜುಗಳನ್ನು ನೀಟ್, ಸಿಇಟಿ, ಜೆಇಇ ಹೆಸರಿನಲ್ಲಿ ವಿಭಜಿಸಲಾಗುತ್ತಿದೆ. ಕಾಲೇಜಿನ ಶುಲ್ಕವನ್ನು ಹೆಚ್ಚಿಸದಂತೆ ತಡೆಯಬಹುದು. ಆದರೆ, ಕಳೆದ ಎರಡು ವರ್ಷಗಳಿಂದ ಈ ಮಾರ್ಗಸೂಚಿಗಳನ್ನು ನೀಡುವುದನ್ನು ಸರ್ಕಾರ ನಿಲ್ಲಿಸಿದೆ ಎಂದು ದೂರಿದರು.</p>.<p>ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಲು ಮತ್ತು ಖಾಸಗಿ ಕಾಲೇಜು-ಕೋಚಿಂಗ್ ಸೆಂಟರ್ ಗಳು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಭಾರಿ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ. ಶಿಕ್ಷಣ ಸಂಸ್ಥೆಗಳಿಗೆ ಲಾಬ ಮಾಡಿಕೊಡುವುದೇ ಇದರ ಉದ್ದೇಶವಾಗಿದೆ. ಶುಲ್ಕ ಹೆಚ್ಚಳವನ್ನು ನಿಯಂತ್ರಿಸಿ ಮಾರ್ಗಸೂಚಿಗಳನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ರಾಜ್ಯ ಘಟಕದ ಸಂಚಾಲಕ ಅಜೀಜ್ ಜಾಗೀರದಾರ, ಜಿಲ್ಲಾ ಘಟಕದ ಕಾರ್ಯದರ್ಶಿ ನಿರಂಜನ್ ಕುಮಾರ, ಆದೇಶ ನಗನೂರು, ಯಲ್ಲಪ್ಪ, ಅಬ್ಬಾಸಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಇಂಟಿಗ್ರೇಟೆಡ್ ಕೋರ್ಸ್ಗಳ ಹೆಸರಿನಲ್ಲಿ ಖಾಸಗಿ ಪದವಿ ಪೂರ್ವ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್ಎಸ್ಒ) ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.</p>.<p>ರಾಜ್ಯದ ಖಾಸಗಿ ಪದವಿ ಪೂರ್ವ ಕಾಲೇಜುಗಳು ನೀಟ್, ಸಿಇಟಿ, ಜೆಇಇ ಒದಗಿಸಲಾದ ಕೋಚಿಂಗ್ ತರಗತಿಗಳ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಶೇ 100ರಷ್ಟು ಶುಲ್ಕ ಹೆಚ್ಚಳ ಮಾಡಿದೆ. ಕರ್ನಾಟಕ ಶಿಕ್ಷಣ ಕಾಯಿದೆ - 1983ರ ಅಡಿಯಲ್ಲಿ, ಶುಲ್ಕ ಹೆಚ್ಚಳ ತಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ತಿಳಿಸಿದರು.</p>.<p>ಕಾಲೇಜುಗಳನ್ನು ನೀಟ್, ಸಿಇಟಿ, ಜೆಇಇ ಹೆಸರಿನಲ್ಲಿ ವಿಭಜಿಸಲಾಗುತ್ತಿದೆ. ಕಾಲೇಜಿನ ಶುಲ್ಕವನ್ನು ಹೆಚ್ಚಿಸದಂತೆ ತಡೆಯಬಹುದು. ಆದರೆ, ಕಳೆದ ಎರಡು ವರ್ಷಗಳಿಂದ ಈ ಮಾರ್ಗಸೂಚಿಗಳನ್ನು ನೀಡುವುದನ್ನು ಸರ್ಕಾರ ನಿಲ್ಲಿಸಿದೆ ಎಂದು ದೂರಿದರು.</p>.<p>ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಲು ಮತ್ತು ಖಾಸಗಿ ಕಾಲೇಜು-ಕೋಚಿಂಗ್ ಸೆಂಟರ್ ಗಳು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಭಾರಿ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ. ಶಿಕ್ಷಣ ಸಂಸ್ಥೆಗಳಿಗೆ ಲಾಬ ಮಾಡಿಕೊಡುವುದೇ ಇದರ ಉದ್ದೇಶವಾಗಿದೆ. ಶುಲ್ಕ ಹೆಚ್ಚಳವನ್ನು ನಿಯಂತ್ರಿಸಿ ಮಾರ್ಗಸೂಚಿಗಳನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.</p>.<p>ಸಮಿತಿಯ ರಾಜ್ಯ ಘಟಕದ ಸಂಚಾಲಕ ಅಜೀಜ್ ಜಾಗೀರದಾರ, ಜಿಲ್ಲಾ ಘಟಕದ ಕಾರ್ಯದರ್ಶಿ ನಿರಂಜನ್ ಕುಮಾರ, ಆದೇಶ ನಗನೂರು, ಯಲ್ಲಪ್ಪ, ಅಬ್ಬಾಸಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>