ಸಿಂಧನೂರು: ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದ ಪ್ರತಿಯೊಂದು ವಿಷಯದಲ್ಲಿಯೂ ಸಾಮಾಜಿಕ ವಿಭಾಗೀಕರಣದ ಗುರಿ ಹೊಂದಿರುವ ಗ್ರಾಮೀಣಾಭಿವೃದ್ದಿ ಇಲಾಖೆಯ ಸಲಹೆ ರೂಪದ ಆದೇಶವನ್ನು ವಿರೋಧಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ದಲಿತ ಹಕ್ಕುಗಳ ಸಮಿತಿ ಹಾಗೂ ಸಾಲಗುಂದಾದ ಉದ್ಯೋಗ ಖಾತ್ರಿ ಯೋಜನೆ ಜಾರಿ ಸಮಿತಿ ಜಂಟಿಯಾಗಿ ಮಂಗಳವಾರ ಮಿನಿವಿಧಾನಸೌಧ ಮುಂದೆ ಪ್ರತಿಭಟಿಸಿದವು.