<p><strong>ರಾಯಚೂರು</strong>: ಗ್ರಾಹಕನಿಗೆ ಸಕಾಲದಲ್ಲಿ ಪಿಜ್ಜಾ ತಲುಪಿಸದೇ ಹಣ ಸ್ವೀಕರಿಸಿದ ಸಂದೇಶ ಕಳುಹಿಸಿ ಮಾನಸಿಕ ವ್ಯಥೆ ಉಂಟು ಮಾಡಿದ ಕಾರಣಕ್ಕೆ ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಎರಡು ಕಂಪನಿಗಳಿಗೆ ₹ 40 ಸಾವಿರ ಪರಿಹಾರ ಪಾವತಿಸುವಂತೆ ಆದೇಶಿಸಿದೆ.</p>.<p>ವಕೀಲೆ ವಿದ್ಯಾಶ್ರೀ ಅವರು 2024ರ ಮಾರ್ಚ್ 17ರಂದು ಸಂಜೆ 7 ಗಂಟೆಗೆ ಜೊಮ್ಯಾಟೊ ಮೂಲಕ ಡಾಮಿನೋಸ್ ಪಿಜ್ಜಾ ಕಳುಹಿಸಿಕೊಡುವಂತೆ ₹ 337.45 ಪಾವತಿಸಿ ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದರು. ರಾತ್ರಿ 9 ಗಂಟೆಯಾದರೂ ಜೊಮ್ಯಾಟೊದವರು ಸರಬರಾಜು ಮಾಡಿರಲಿಲ್ಲ. ಫೋನ್ ಮಾಡಿ ವಿಚಾರಿಸಿದಾಗ, ಪಿಜ್ಜಾ ಸಿದ್ಧಪಡಿಸುತ್ತಿದ್ದು, ಕಳುಹಿಸುವುದಾಗಿ ಹೇಳಿದರೂ ಕಳುಹಿಸಿಕೊಡಲಿಲ್ಲ. ಆದರೆ, ನಂತರ ಸರಬರಾಜು ಮಾಡದಿದ್ದರೂ ಹಣ ಸ್ವೀಕರಿಸಿದ ಸಂದೇಶ ಮೊಬೈಲ್ಗೆ ಬಂದಿದೆ. ಹೀಗಾಗಿ ಮತ್ತೆ ಫೋನ್ ಮಾಡಿ ವಿಚಾರಿಸಿದರೂ ಕಂಪನಿಯಿಂದ ಸರಿಯಾದ ಉತ್ತರ ದೊರಕಿರಲಿಲ್ಲ.</p>.<p>ಫಿರ್ಯಾದಿದಾರರು ಸೇವಾ ನೂನ್ಯತೆಯಿಂದ ಉಂಟಾದ ಮಾನಸಿಕ ವ್ಯಥೆಗೆ ಪರಿಹಾರ ಕೊಡುವಂತೆ ಕೋರಿ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ಆಯೋಗವು ರಾಯಚೂರು ಜೊಮ್ಯಾಟೊ ಹಾಗೂ ಬೆಂಗಳೂರಿನ ಡಾಮಿನೋಸ್ಗೆ ನೋಟಿಸ್ ಕಳುಹಿಸಿದ್ದರೂ ಆಯೋಗದ ಮುಂದೆ ಹಾಜರಾಗಿರಲಿಲ್ಲ.</p>.<p>ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರಕುಮಾರ ಹಾಗೂ ಸದಸ್ಯ ಪ್ರಭುದೇವ ಪಾಟೀಲ ಅವರು ಫಿರ್ಯಾದಿದಾರರ ಸಾಕ್ಷಿ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನಂತರ ಜೊಮ್ಯಾಟೊ ಹಾಗೂ ಡಾಮಿನೋಸ್ಗೆ ಜಂಟಿಯಾಗಿ ₹ 40 ಸಾವಿರ ಪರಿಹಾರ ಪಾವತಿಸಬೇಕು ಎಂದು ಆದೇಶ ನೀಡಿದ್ದಾರೆ ಎಂದು ಜಿಲ್ಲಾ ಆಯೋಗದ ಸಹಾಯಕ ರಿಜಿಸ್ಟ್ರಾರ್ ಅಣ್ಣಾರಾವ್ ಹಾಬಾಳಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಗ್ರಾಹಕನಿಗೆ ಸಕಾಲದಲ್ಲಿ ಪಿಜ್ಜಾ ತಲುಪಿಸದೇ ಹಣ ಸ್ವೀಕರಿಸಿದ ಸಂದೇಶ ಕಳುಹಿಸಿ ಮಾನಸಿಕ ವ್ಯಥೆ ಉಂಟು ಮಾಡಿದ ಕಾರಣಕ್ಕೆ ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಎರಡು ಕಂಪನಿಗಳಿಗೆ ₹ 40 ಸಾವಿರ ಪರಿಹಾರ ಪಾವತಿಸುವಂತೆ ಆದೇಶಿಸಿದೆ.</p>.<p>ವಕೀಲೆ ವಿದ್ಯಾಶ್ರೀ ಅವರು 2024ರ ಮಾರ್ಚ್ 17ರಂದು ಸಂಜೆ 7 ಗಂಟೆಗೆ ಜೊಮ್ಯಾಟೊ ಮೂಲಕ ಡಾಮಿನೋಸ್ ಪಿಜ್ಜಾ ಕಳುಹಿಸಿಕೊಡುವಂತೆ ₹ 337.45 ಪಾವತಿಸಿ ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದರು. ರಾತ್ರಿ 9 ಗಂಟೆಯಾದರೂ ಜೊಮ್ಯಾಟೊದವರು ಸರಬರಾಜು ಮಾಡಿರಲಿಲ್ಲ. ಫೋನ್ ಮಾಡಿ ವಿಚಾರಿಸಿದಾಗ, ಪಿಜ್ಜಾ ಸಿದ್ಧಪಡಿಸುತ್ತಿದ್ದು, ಕಳುಹಿಸುವುದಾಗಿ ಹೇಳಿದರೂ ಕಳುಹಿಸಿಕೊಡಲಿಲ್ಲ. ಆದರೆ, ನಂತರ ಸರಬರಾಜು ಮಾಡದಿದ್ದರೂ ಹಣ ಸ್ವೀಕರಿಸಿದ ಸಂದೇಶ ಮೊಬೈಲ್ಗೆ ಬಂದಿದೆ. ಹೀಗಾಗಿ ಮತ್ತೆ ಫೋನ್ ಮಾಡಿ ವಿಚಾರಿಸಿದರೂ ಕಂಪನಿಯಿಂದ ಸರಿಯಾದ ಉತ್ತರ ದೊರಕಿರಲಿಲ್ಲ.</p>.<p>ಫಿರ್ಯಾದಿದಾರರು ಸೇವಾ ನೂನ್ಯತೆಯಿಂದ ಉಂಟಾದ ಮಾನಸಿಕ ವ್ಯಥೆಗೆ ಪರಿಹಾರ ಕೊಡುವಂತೆ ಕೋರಿ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ಆಯೋಗವು ರಾಯಚೂರು ಜೊಮ್ಯಾಟೊ ಹಾಗೂ ಬೆಂಗಳೂರಿನ ಡಾಮಿನೋಸ್ಗೆ ನೋಟಿಸ್ ಕಳುಹಿಸಿದ್ದರೂ ಆಯೋಗದ ಮುಂದೆ ಹಾಜರಾಗಿರಲಿಲ್ಲ.</p>.<p>ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷ ಕೆ.ವಿ.ಸುರೇಂದ್ರಕುಮಾರ ಹಾಗೂ ಸದಸ್ಯ ಪ್ರಭುದೇವ ಪಾಟೀಲ ಅವರು ಫಿರ್ಯಾದಿದಾರರ ಸಾಕ್ಷಿ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನಂತರ ಜೊಮ್ಯಾಟೊ ಹಾಗೂ ಡಾಮಿನೋಸ್ಗೆ ಜಂಟಿಯಾಗಿ ₹ 40 ಸಾವಿರ ಪರಿಹಾರ ಪಾವತಿಸಬೇಕು ಎಂದು ಆದೇಶ ನೀಡಿದ್ದಾರೆ ಎಂದು ಜಿಲ್ಲಾ ಆಯೋಗದ ಸಹಾಯಕ ರಿಜಿಸ್ಟ್ರಾರ್ ಅಣ್ಣಾರಾವ್ ಹಾಬಾಳಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>