ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಎಂ.ಡಿ.ಶಾಕಿರ್ ಮಾತನಾಡಿ, ಜಿಲ್ಲೆಯಲ್ಲಿ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕವು ಜೂನ್ 3 ರಿಂದ 17 ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಅತಿಸಾರಭೇದಿಯಿಂದ ಬಳಲುವ ೦-5 ವರ್ಷದೊಳಗಿನ ಮಕ್ಕಳಿಗೆ ಓ.ಆರ್.ಎಸ್.ದ್ರಾವಣ ಮತ್ತು ಜಿಂಕ ಮಾತ್ರೆಗಳನ್ನು ನೀಡುತ್ತಾರೆ. ತಾಯಂದಿರಿಗೆ ಓ.ಆರ್.ಎಸ್ ದ್ರಾವಣ ತಯಾರಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಕೈ ತೊಳೆಯುವ ವಿಧಾನದ ಬಗ್ಗೆ ತಿಳಿವಳಿಕೆ ನೀಡುವರು ಎಂದರು.