<p><strong>ರಾಯಚೂರು: </strong>ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕಾಗಿ ವಿವಿಧ ಜಿಲ್ಲೆಗಳಿಂದ ರಾಯಚೂರಿನ ಮೂಲಕ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಸಂಖ್ಯೆ ಕೋವಿಡ್ ಭೀತಿಯಿಂದ ಈ ವರ್ಷ ಗಣನೀಯ ಕುಸಿತವಾಗಿದೆ.</p>.<p>ಪಾದಯಾತ್ರಿಗಳಿಗೆ ಉಚಿತ ಅನ್ನಸಂತರ್ಪಣೆ, ನೀರು, ಮಜ್ಜಿಗೆ ಹಾಗೂ ಹಣ್ಣು ವಿತರಿಸುವುದಕ್ಕಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ದಾನಿಗಳು ತೆರೆದ ಮಳಿಗೆಗಳು ಖಾಲಿಖಾಲಿ ಉಳಿದಿವೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿಯಿಂದ ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನಡೆದುಹೋಗುವ ದೃಶ್ಯ ಕಾಣುತ್ತಿತ್ತು. ಈ ಸಲ ಭಕ್ತರ ಗುಂಪುಗಳು ತುಂಬಾ ವಿರಳವಾಗಿವೆ.</p>.<p>ಒತ್ತಾಯಪೂರ್ವಕ ಬಂದ್: ಸರ್ಕಾರವು ಬಂದ್ ಘೋಷಿಸಿದ್ದರೂ ರಾಯಚೂರಿನಲ್ಲಿ ಮಾಲ್ಗಳು ಮತ್ತು ಚಿತ್ರಮಂದಿರಗಳು ತೆರೆದುಕೊಂಡಿದ್ದವು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮಧ್ಯಾಹ್ನ ಒತ್ತಾಯಪೂರ್ವಕ ಬಂದ್ ಮಾಡಿಸಿದರು. ಕೆಲವು ಖಾಸಗಿ ಶಾಲೆಗಳು 1 ರಿಂದ 6 ತರಗತಿ ಮಕ್ಕಳಿಗೆ ಶನಿವಾರ ಮಧ್ಯಾಹ್ನದವರೆಗೂ ಪರೀಕ್ಷೆ ನಡೆಸಿ, ಆನಂತರ ರಜೆ ಘೋಷಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕಾಗಿ ವಿವಿಧ ಜಿಲ್ಲೆಗಳಿಂದ ರಾಯಚೂರಿನ ಮೂಲಕ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಸಂಖ್ಯೆ ಕೋವಿಡ್ ಭೀತಿಯಿಂದ ಈ ವರ್ಷ ಗಣನೀಯ ಕುಸಿತವಾಗಿದೆ.</p>.<p>ಪಾದಯಾತ್ರಿಗಳಿಗೆ ಉಚಿತ ಅನ್ನಸಂತರ್ಪಣೆ, ನೀರು, ಮಜ್ಜಿಗೆ ಹಾಗೂ ಹಣ್ಣು ವಿತರಿಸುವುದಕ್ಕಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ದಾನಿಗಳು ತೆರೆದ ಮಳಿಗೆಗಳು ಖಾಲಿಖಾಲಿ ಉಳಿದಿವೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿಯಿಂದ ಪ್ರತಿವರ್ಷ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನಡೆದುಹೋಗುವ ದೃಶ್ಯ ಕಾಣುತ್ತಿತ್ತು. ಈ ಸಲ ಭಕ್ತರ ಗುಂಪುಗಳು ತುಂಬಾ ವಿರಳವಾಗಿವೆ.</p>.<p>ಒತ್ತಾಯಪೂರ್ವಕ ಬಂದ್: ಸರ್ಕಾರವು ಬಂದ್ ಘೋಷಿಸಿದ್ದರೂ ರಾಯಚೂರಿನಲ್ಲಿ ಮಾಲ್ಗಳು ಮತ್ತು ಚಿತ್ರಮಂದಿರಗಳು ತೆರೆದುಕೊಂಡಿದ್ದವು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮಧ್ಯಾಹ್ನ ಒತ್ತಾಯಪೂರ್ವಕ ಬಂದ್ ಮಾಡಿಸಿದರು. ಕೆಲವು ಖಾಸಗಿ ಶಾಲೆಗಳು 1 ರಿಂದ 6 ತರಗತಿ ಮಕ್ಕಳಿಗೆ ಶನಿವಾರ ಮಧ್ಯಾಹ್ನದವರೆಗೂ ಪರೀಕ್ಷೆ ನಡೆಸಿ, ಆನಂತರ ರಜೆ ಘೋಷಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>