<p><strong>ರಾಯಚೂರು: </strong>ಆದಿ ಮಾನವನ ಕಾಲದಿಂದ ಮೂಢ ನಂಬಿಕೆಗಳನ್ನು ನಂಬಲಾಗುತ್ತಿದ್ದು, ಇದರಿಂದ ಬದುಕು ದುಸ್ತರವಾಗುತ್ತಿದೆ ಎಂದು ಯುವ ಸಾಹಿತಿ ಈರಣ್ಣ ಬೆಂಗಾಲಿ ಹೇಳಿದರು.</p>.<p>ಸುಗುಣ ಶಿಕ್ಷಣ ಸಂಸ್ಥೆಯ ಬಸವಶ್ರೀ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಿಜ್ಞಾನ, ತಂತ್ರಜ್ಞಾನ ಯುಗದಲ್ಲೂ ಮೂಢ ನಂಬಿಕೆಗಳು ಜೀವನದಲ್ಲಿ ಹಾಸುಹೊಕ್ಕಾಗಿವೆ. ಇದು, ಜೀವನದ ಏರುಪೇರಿಗೆ ಕಾರಣವಾಗಿದೆ. ಆದ್ದರಿಂದ ಅಂಧಶ್ರದ್ಧೆ ಆಚರಣೆ ಕೈಬಿಟ್ಟು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.</p>.<p>12ನೇ ಶತಮಾನದ ವಚನಕಾರರು ವಚನಗಳ ಮೂಲಕ ಮೂಢ ನಂಬಿಕೆ ಹೊಡೆದೂಡಿಸಿ ಸಮಾಜದ ಸುಧಾರಣೆಗೆ ಪ್ರಯತ್ನಿಸಿದ್ದರು. ಶರಣರ ಮಾರ್ಗದಲ್ಲಿ ವಿದ್ಯಾರ್ಥಿಗಳು ನಡೆದು, ವೈಚಾರಿಕ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ವಿಷಯವನ್ನು ಪೂರ್ವಾಪರ ಅರಿಯದೇ ಒಪ್ಪಿಕೊಳ್ಳಬಾರದು ಎಂದು ತಿಳಿಸಿದರು.</p>.<p>ಮೂಢನಂಬಿಕೆ ಮತ್ತು ವಿಜ್ಞಾನದ ಕುರಿತು ಮುಖ್ಯ ಅತಿಥಿ ಸುರೇಶ್ ಮಾತನಾಡಿ, ನಿತ್ಯದ ಜೀವನದಲ್ಲಿ ವಿಜ್ಞಾನ ಹಾಸುಹೊಕ್ಕಾಗಿದೆ. ವಿಜ್ಞಾನ ಬಾಳಿಗೆ ಬೆಳಕು ನೀಡಲಿದ್ದು, ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಂಡು ಕಾಯಕದಲ್ಲಿ ವಿಶ್ವಾಸವಿಟ್ಟು ಮುನ್ನಡೆದರೆ ಒಳಿತಾಗುತ್ತದೆ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಚನ ಸಾಹಿತಿ ರಾಮಸ್ವಾಮಿ ನೂಲಿ ಮಾತನಾಡಿ, ಮನಸ್ಸು ಶುದ್ಧವಾಗಿಸುವುದರೊಂದಿಗೆ ಪಂಚೇಂದ್ರಿಯಗಳಲ್ಲಿ ತುಂಬಿಕೊಂಡಿರುವ ಮಲೀನ ಸ್ವಚ್ಚಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸಂಸ್ಥಾಪಕಿ ಎಂ.ಲಲಿತಾ ಪ್ರಾಸ್ತಾವಿಕ ಮಾತನಾಡಿ, ಪ್ರತೀ ಪಂಚಮಿ ಕಾರ್ಯಕ್ರಮದಲ್ಲಿ ಅಂಧ ಮಕ್ಕಳಿಗೆ, ಅನಾಥರಿಗೆ ಹಾಗೂ ಬಡವರಿಗೆ ಹಾಲು ವಿತರಣೆ ಮಾಡುವ ಮೂಲಕ ವೈಚಾರಿಕತೆ ಅಳವಡಿಕೊಳ್ಳಲಾಗಿದೆ. ಪ್ರತಿ ತಿಂಗಳು ವಚನ ಸಿಂಚನ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು.</p>.<p>ವಿಜಯಲಕ್ಷ್ಮೀ ಸ್ವಾಗತಿಸಿದರು. ಮಲ್ಲಣ್ಣ ವಂದಿಸಿದರು. ವಿರೂಪಾಕ್ಷಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಆದಿ ಮಾನವನ ಕಾಲದಿಂದ ಮೂಢ ನಂಬಿಕೆಗಳನ್ನು ನಂಬಲಾಗುತ್ತಿದ್ದು, ಇದರಿಂದ ಬದುಕು ದುಸ್ತರವಾಗುತ್ತಿದೆ ಎಂದು ಯುವ ಸಾಹಿತಿ ಈರಣ್ಣ ಬೆಂಗಾಲಿ ಹೇಳಿದರು.</p>.<p>ಸುಗುಣ ಶಿಕ್ಷಣ ಸಂಸ್ಥೆಯ ಬಸವಶ್ರೀ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ವಿಜ್ಞಾನ, ತಂತ್ರಜ್ಞಾನ ಯುಗದಲ್ಲೂ ಮೂಢ ನಂಬಿಕೆಗಳು ಜೀವನದಲ್ಲಿ ಹಾಸುಹೊಕ್ಕಾಗಿವೆ. ಇದು, ಜೀವನದ ಏರುಪೇರಿಗೆ ಕಾರಣವಾಗಿದೆ. ಆದ್ದರಿಂದ ಅಂಧಶ್ರದ್ಧೆ ಆಚರಣೆ ಕೈಬಿಟ್ಟು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.</p>.<p>12ನೇ ಶತಮಾನದ ವಚನಕಾರರು ವಚನಗಳ ಮೂಲಕ ಮೂಢ ನಂಬಿಕೆ ಹೊಡೆದೂಡಿಸಿ ಸಮಾಜದ ಸುಧಾರಣೆಗೆ ಪ್ರಯತ್ನಿಸಿದ್ದರು. ಶರಣರ ಮಾರ್ಗದಲ್ಲಿ ವಿದ್ಯಾರ್ಥಿಗಳು ನಡೆದು, ವೈಚಾರಿಕ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ವಿಷಯವನ್ನು ಪೂರ್ವಾಪರ ಅರಿಯದೇ ಒಪ್ಪಿಕೊಳ್ಳಬಾರದು ಎಂದು ತಿಳಿಸಿದರು.</p>.<p>ಮೂಢನಂಬಿಕೆ ಮತ್ತು ವಿಜ್ಞಾನದ ಕುರಿತು ಮುಖ್ಯ ಅತಿಥಿ ಸುರೇಶ್ ಮಾತನಾಡಿ, ನಿತ್ಯದ ಜೀವನದಲ್ಲಿ ವಿಜ್ಞಾನ ಹಾಸುಹೊಕ್ಕಾಗಿದೆ. ವಿಜ್ಞಾನ ಬಾಳಿಗೆ ಬೆಳಕು ನೀಡಲಿದ್ದು, ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಂಡು ಕಾಯಕದಲ್ಲಿ ವಿಶ್ವಾಸವಿಟ್ಟು ಮುನ್ನಡೆದರೆ ಒಳಿತಾಗುತ್ತದೆ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಚನ ಸಾಹಿತಿ ರಾಮಸ್ವಾಮಿ ನೂಲಿ ಮಾತನಾಡಿ, ಮನಸ್ಸು ಶುದ್ಧವಾಗಿಸುವುದರೊಂದಿಗೆ ಪಂಚೇಂದ್ರಿಯಗಳಲ್ಲಿ ತುಂಬಿಕೊಂಡಿರುವ ಮಲೀನ ಸ್ವಚ್ಚಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸಂಸ್ಥಾಪಕಿ ಎಂ.ಲಲಿತಾ ಪ್ರಾಸ್ತಾವಿಕ ಮಾತನಾಡಿ, ಪ್ರತೀ ಪಂಚಮಿ ಕಾರ್ಯಕ್ರಮದಲ್ಲಿ ಅಂಧ ಮಕ್ಕಳಿಗೆ, ಅನಾಥರಿಗೆ ಹಾಗೂ ಬಡವರಿಗೆ ಹಾಲು ವಿತರಣೆ ಮಾಡುವ ಮೂಲಕ ವೈಚಾರಿಕತೆ ಅಳವಡಿಕೊಳ್ಳಲಾಗಿದೆ. ಪ್ರತಿ ತಿಂಗಳು ವಚನ ಸಿಂಚನ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು.</p>.<p>ವಿಜಯಲಕ್ಷ್ಮೀ ಸ್ವಾಗತಿಸಿದರು. ಮಲ್ಲಣ್ಣ ವಂದಿಸಿದರು. ವಿರೂಪಾಕ್ಷಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>