<p><strong>ಹಟ್ಟಿ ಚಿನ್ನದ ಗಣಿ:</strong> ಆನ್ವರಿ ಗ್ರಾಮದ ಸೇತುವೆಯಲ್ಲಿ ಬೊಂಗಾ ಬಿದ್ದಿದ್ದು, ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.</p>.<p>ಈ ರಸ್ತೆಯು ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸಿದೆ. ಆನ್ವರಿ ಗ್ರಾಮದಿಂದ 2 ಕಿ.ಮೀ ದೂರದಲ್ಲಿ ಜೂಗಪ್ಪನ ಹಳ್ಳದ ಸೇತುವೆ ರಸ್ತೆ ಮಧ್ಯೆ ಗುಂಡಿ ಬಿದ್ದಿದೆ. ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಾಗುತ್ತವೆ. ಕೆಲವರು ಗುಂಡಿ ತಪ್ಪಿಸಲು ಹೋಗಿ ಬಿದ್ದು ಗಾಯವಾದ ಘಟನೆ ಜರುಗಿವೆ. ಜನರ ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು ಇತ್ತ ಕಡೆ ಸುಳಿಯುತ್ತಿಲ್ಲ ಎಂದು ಗ್ರಾಮಸ್ಧ ನಾಗರಾಜ ನಾಯಕ ದೂರಿದ್ದಾರೆ.</p>.<p>ಒಂದು ವರ್ಷದ ಹಿಂದೆ 9 ಕಿ.ಮೀ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ. ಆದರೆ ಗುತ್ತಿಗೆದಾರ 7 ಕಿ.ಮೀ ರಸ್ತೆ ನಿರ್ಮಾಣ ಮಾಡಿ ಉಳಿದ 2ಕಿ.ಮೀ ರಸ್ತೆಗೆ ಡಾಂಬರ್ ಹಾಕದೆ ಹಾಗೆ ಬಿಟ್ಟಿದ್ದಾರೆ. ಇದರಿಂದ ಜನರಿಗೆ ಸಮಸ್ಯೆ ಎದುರಾಗಿದೆ ಎನ್ನುತ್ತಾರೆ ಗ್ರಾಮಸ್ಧರು.</p>.<p>ಗುತ್ತಿಗೆದಾರರು ಸರ್ಕಾರದ ನಿಮಯಗಳನ್ನು ಗಾಳಿಗೆ ತೂರಿ ಅರ್ಧ ಕಾಮಗಾರಿ ಮಾಡಿ ಸರ್ಕಾರದ ಅನುದಾನವನ್ನು ಕೊಳ್ಳೆ ಹೊಡೆಯುವ ಹುನ್ನಾರ ನಡೆಸಿದ್ದಾರೆ. ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದ ಗುತ್ತಿಗೆದಾರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಕರುನಾಡ ವಿಜಯ ಸೇನೆ ಸಂಘಟನೆಯ ಅಧ್ಯಕ್ಷ ಅಮರೇಶ ಒತ್ತಾಯಿಸಿದ್ದಾರೆ.</p>.<p>ಗ್ರಾ.ಪಂ.ಅಧಿಕಾರಿಗಳು ಹಾಗೂ ಸದಸ್ಯರಿಗೆ ತಿಳಿಸಿದರೂ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ರಸ್ತೆ ಮಧ್ಯ ಬಿದ್ದ ಗುಂಡಿಯನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ನಿರ್ಲಕ್ಷ್ಯ ಮಾಡಿದರೆ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಧರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಆನ್ವರಿ ಗ್ರಾಮದ ಸೇತುವೆಯಲ್ಲಿ ಬೊಂಗಾ ಬಿದ್ದಿದ್ದು, ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.</p>.<p>ಈ ರಸ್ತೆಯು ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸಿದೆ. ಆನ್ವರಿ ಗ್ರಾಮದಿಂದ 2 ಕಿ.ಮೀ ದೂರದಲ್ಲಿ ಜೂಗಪ್ಪನ ಹಳ್ಳದ ಸೇತುವೆ ರಸ್ತೆ ಮಧ್ಯೆ ಗುಂಡಿ ಬಿದ್ದಿದೆ. ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಾಗುತ್ತವೆ. ಕೆಲವರು ಗುಂಡಿ ತಪ್ಪಿಸಲು ಹೋಗಿ ಬಿದ್ದು ಗಾಯವಾದ ಘಟನೆ ಜರುಗಿವೆ. ಜನರ ಸಮಸ್ಯೆ ಬಗೆಹರಿಸಬೇಕಾದ ಅಧಿಕಾರಿಗಳು ಇತ್ತ ಕಡೆ ಸುಳಿಯುತ್ತಿಲ್ಲ ಎಂದು ಗ್ರಾಮಸ್ಧ ನಾಗರಾಜ ನಾಯಕ ದೂರಿದ್ದಾರೆ.</p>.<p>ಒಂದು ವರ್ಷದ ಹಿಂದೆ 9 ಕಿ.ಮೀ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆಯಾಗಿದೆ. ಆದರೆ ಗುತ್ತಿಗೆದಾರ 7 ಕಿ.ಮೀ ರಸ್ತೆ ನಿರ್ಮಾಣ ಮಾಡಿ ಉಳಿದ 2ಕಿ.ಮೀ ರಸ್ತೆಗೆ ಡಾಂಬರ್ ಹಾಕದೆ ಹಾಗೆ ಬಿಟ್ಟಿದ್ದಾರೆ. ಇದರಿಂದ ಜನರಿಗೆ ಸಮಸ್ಯೆ ಎದುರಾಗಿದೆ ಎನ್ನುತ್ತಾರೆ ಗ್ರಾಮಸ್ಧರು.</p>.<p>ಗುತ್ತಿಗೆದಾರರು ಸರ್ಕಾರದ ನಿಮಯಗಳನ್ನು ಗಾಳಿಗೆ ತೂರಿ ಅರ್ಧ ಕಾಮಗಾರಿ ಮಾಡಿ ಸರ್ಕಾರದ ಅನುದಾನವನ್ನು ಕೊಳ್ಳೆ ಹೊಡೆಯುವ ಹುನ್ನಾರ ನಡೆಸಿದ್ದಾರೆ. ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದ ಗುತ್ತಿಗೆದಾರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಕರುನಾಡ ವಿಜಯ ಸೇನೆ ಸಂಘಟನೆಯ ಅಧ್ಯಕ್ಷ ಅಮರೇಶ ಒತ್ತಾಯಿಸಿದ್ದಾರೆ.</p>.<p>ಗ್ರಾ.ಪಂ.ಅಧಿಕಾರಿಗಳು ಹಾಗೂ ಸದಸ್ಯರಿಗೆ ತಿಳಿಸಿದರೂ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ರಸ್ತೆ ಮಧ್ಯ ಬಿದ್ದ ಗುಂಡಿಯನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ನಿರ್ಲಕ್ಷ್ಯ ಮಾಡಿದರೆ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಧರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>