<p><strong>ರಾಯಚೂರು:</strong> ಇಲ್ಲಿನ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆದಾಖಲಾಗಿದ್ದ ರೋಗಿಯೊಬ್ಬರು 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಜರುಗಿದೆ.</p>.<p>ರಾಯಚೂರಿನ ಎಲ್ಬಿಎಸ್ ನಗರದ ನಿವಾಸಿ ತಾಹೀರ್ ಅಹ್ಮದ್(42) ಮೃತ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ತಾಹೇರ್ ಎರಡು ಬಾರಿ ವಿವಾಹವಾಗಿ ಇಬ್ಬರಿಗೂ ವಿಚ್ಛೇದನ ನೀಡಿದ್ದಾರೆ.</p>.<p>ಹೊಟ್ಟೆನೋವಿನಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ತಾಹೇರ್ ಮಾನಸಿಕ ಖಿನ್ನತೆಗೊಳಲಾಗಿದ್ದ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾಸ್ಕರ್ ಈ ಕುರಿತು ಪ್ರತಿಕ್ರಿಯೆ ನೀಡಿ, ‘ಮಾರ್ಚ್ 30ರಂದು ಆಸ್ಪತ್ರೆಗೆ ಹೊಟ್ಟೆನೋವಿಗಾಗಿ ದಾಖಲಾಗಿದ್ದ ರೋಗಿಯು ಚಿಕಿತ್ಸೆ ಪಡೆಯುತ್ತಿದ್ದ. ಇದ್ದಕ್ಕಿದ್ದಂತೆ ಹಾಸಿಗೆಯಲ್ಲಿ ಕಾಣೆಯಾಗಿದ್ದ ರೋಗಿಯನ್ನು ಸಿಬ್ಬಂದಿ ಹುಡುಕಾಡಿದಾಗ ಶವ ಪತ್ತೆಯಾಗಿದೆ. ಸಿಬ್ಬಂದಿ ವಿಚಾರಣೆ ನಡೆಸಿ, ಮೃತದೇಹವನ್ನು ಶವಾಗಾರಕ್ಕೆ ಪರೀಕ್ಷೆಗೆ ಕಳಿಸಲಾಗಿದೆ‘ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಇಲ್ಲಿನ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆದಾಖಲಾಗಿದ್ದ ರೋಗಿಯೊಬ್ಬರು 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಜರುಗಿದೆ.</p>.<p>ರಾಯಚೂರಿನ ಎಲ್ಬಿಎಸ್ ನಗರದ ನಿವಾಸಿ ತಾಹೀರ್ ಅಹ್ಮದ್(42) ಮೃತ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ತಾಹೇರ್ ಎರಡು ಬಾರಿ ವಿವಾಹವಾಗಿ ಇಬ್ಬರಿಗೂ ವಿಚ್ಛೇದನ ನೀಡಿದ್ದಾರೆ.</p>.<p>ಹೊಟ್ಟೆನೋವಿನಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ತಾಹೇರ್ ಮಾನಸಿಕ ಖಿನ್ನತೆಗೊಳಲಾಗಿದ್ದ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾಸ್ಕರ್ ಈ ಕುರಿತು ಪ್ರತಿಕ್ರಿಯೆ ನೀಡಿ, ‘ಮಾರ್ಚ್ 30ರಂದು ಆಸ್ಪತ್ರೆಗೆ ಹೊಟ್ಟೆನೋವಿಗಾಗಿ ದಾಖಲಾಗಿದ್ದ ರೋಗಿಯು ಚಿಕಿತ್ಸೆ ಪಡೆಯುತ್ತಿದ್ದ. ಇದ್ದಕ್ಕಿದ್ದಂತೆ ಹಾಸಿಗೆಯಲ್ಲಿ ಕಾಣೆಯಾಗಿದ್ದ ರೋಗಿಯನ್ನು ಸಿಬ್ಬಂದಿ ಹುಡುಕಾಡಿದಾಗ ಶವ ಪತ್ತೆಯಾಗಿದೆ. ಸಿಬ್ಬಂದಿ ವಿಚಾರಣೆ ನಡೆಸಿ, ಮೃತದೇಹವನ್ನು ಶವಾಗಾರಕ್ಕೆ ಪರೀಕ್ಷೆಗೆ ಕಳಿಸಲಾಗಿದೆ‘ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>