ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾಸ್ಕರ್ ಈ ಕುರಿತು ಪ್ರತಿಕ್ರಿಯೆ ನೀಡಿ, ‘ಮಾರ್ಚ್ 30ರಂದು ಆಸ್ಪತ್ರೆಗೆ ಹೊಟ್ಟೆನೋವಿಗಾಗಿ ದಾಖಲಾಗಿದ್ದ ರೋಗಿಯು ಚಿಕಿತ್ಸೆ ಪಡೆಯುತ್ತಿದ್ದ. ಇದ್ದಕ್ಕಿದ್ದಂತೆ ಹಾಸಿಗೆಯಲ್ಲಿ ಕಾಣೆಯಾಗಿದ್ದ ರೋಗಿಯನ್ನು ಸಿಬ್ಬಂದಿ ಹುಡುಕಾಡಿದಾಗ ಶವ ಪತ್ತೆಯಾಗಿದೆ. ಸಿಬ್ಬಂದಿ ವಿಚಾರಣೆ ನಡೆಸಿ, ಮೃತದೇಹವನ್ನು ಶವಾಗಾರಕ್ಕೆ ಪರೀಕ್ಷೆಗೆ ಕಳಿಸಲಾಗಿದೆ‘ ಎಂದರು