<p><strong>ಕವಿತಾಳ</strong>: ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿಸಿದ್ದಾರೆ ಎಂದು ಆರೋಪಿಸಿ ಇಲ್ಲಿಗೆ ಸಮೀಪದ ಅಮೀನಗಡ ಗ್ರಾಮ ಪಂಚಾಯಿತಿ ಎದುರು ಕಾರ್ಮಿಕರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಗ್ರಾಮದ ಹುಲಿಗುಡ್ಡ ಕೆರೆಯಲ್ಲಿ ಒಂದು ವಾರ ನೆಲ ಅಗೆಯುವ ಕೆಲಸ ಮಾಡಿದ್ದೇವೆ. ತಲಾ ₹180 ಪಾವತಿ ಮಾಡಿದ್ದಾರೆ. ಈ ಹಿಂದೆ ಅದೇ ರೀತಿ ಕೆಲಸ ಮಾಡಿದ ಕಾರ್ಮಿಕರಿಗೆ ಹೆಚ್ಚಿನ ಮೊತ್ತ ಪಾವತಿಸಿದ್ದಾರೆ’ ಎಂದು ಕಾರ್ಮಿಕರಾದ ದುರುಗಮ್ಮ, ಖಾಜಾಬೀ, ಶಂಕ್ರಮ್ಮ, ಆದಮ್ಮ, ಬಾಷಾಮಿಯಾ, ಬಸಲಿಂಗಪ್ಪ, ಶೇಖರಪ್ಪ, ಪದ್ಮಾವತಿ, ಸರಸ್ವತಿ, ದೇವಮ್ಮ ಇಮಾಮ್ ಸಾಬ್ ಮತ್ತಿತರರು ಆರೋಪಿಸಿದರು.</p>.<p>‘ಈ ಬಗ್ಗೆ ಚರ್ಚಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮೊಬೈಲ್ ಕರೆ ಮಾಡಿದರೂ ಅವರು ಕರೆ ಸ್ವೀಕರಿಸುತ್ತಿಲ್ಲ’ ಎಂದು ಕಾರ್ಮಿಕರು ದೂರಿದರು.</p>.<p>‘ಕೆಲಸದ ಅಳತೆ ಆಧರಿಸಿ ತಲಾ ₹195 ವೇತನ ಪಾವತಿ ಮಾಡಲಾಗಿದೆ. ಈ ಕುರಿತು ಎಂಜಿನಿಯರ್ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಅಭಿವೃದ್ದಿ ಅಧಿಕಾರಿ ರಾಮಣ್ಣ ನಡಿಗೇರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿಸಿದ್ದಾರೆ ಎಂದು ಆರೋಪಿಸಿ ಇಲ್ಲಿಗೆ ಸಮೀಪದ ಅಮೀನಗಡ ಗ್ರಾಮ ಪಂಚಾಯಿತಿ ಎದುರು ಕಾರ್ಮಿಕರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಗ್ರಾಮದ ಹುಲಿಗುಡ್ಡ ಕೆರೆಯಲ್ಲಿ ಒಂದು ವಾರ ನೆಲ ಅಗೆಯುವ ಕೆಲಸ ಮಾಡಿದ್ದೇವೆ. ತಲಾ ₹180 ಪಾವತಿ ಮಾಡಿದ್ದಾರೆ. ಈ ಹಿಂದೆ ಅದೇ ರೀತಿ ಕೆಲಸ ಮಾಡಿದ ಕಾರ್ಮಿಕರಿಗೆ ಹೆಚ್ಚಿನ ಮೊತ್ತ ಪಾವತಿಸಿದ್ದಾರೆ’ ಎಂದು ಕಾರ್ಮಿಕರಾದ ದುರುಗಮ್ಮ, ಖಾಜಾಬೀ, ಶಂಕ್ರಮ್ಮ, ಆದಮ್ಮ, ಬಾಷಾಮಿಯಾ, ಬಸಲಿಂಗಪ್ಪ, ಶೇಖರಪ್ಪ, ಪದ್ಮಾವತಿ, ಸರಸ್ವತಿ, ದೇವಮ್ಮ ಇಮಾಮ್ ಸಾಬ್ ಮತ್ತಿತರರು ಆರೋಪಿಸಿದರು.</p>.<p>‘ಈ ಬಗ್ಗೆ ಚರ್ಚಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮೊಬೈಲ್ ಕರೆ ಮಾಡಿದರೂ ಅವರು ಕರೆ ಸ್ವೀಕರಿಸುತ್ತಿಲ್ಲ’ ಎಂದು ಕಾರ್ಮಿಕರು ದೂರಿದರು.</p>.<p>‘ಕೆಲಸದ ಅಳತೆ ಆಧರಿಸಿ ತಲಾ ₹195 ವೇತನ ಪಾವತಿ ಮಾಡಲಾಗಿದೆ. ಈ ಕುರಿತು ಎಂಜಿನಿಯರ್ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಅಭಿವೃದ್ದಿ ಅಧಿಕಾರಿ ರಾಮಣ್ಣ ನಡಿಗೇರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>