<p><strong>ರಾಯಚೂರು:</strong>ಜಿಲ್ಲೆಯಾದ್ಯಂತ ಮಕರಣ ಸಂಕ್ರಮಣ ಹಬ್ಬವನ್ನು ಸಂಭ್ರಮ, ಸಡಗರ ಹಾಗೂ ವಿಶೇಷ ಪೂಜೆಪುನಸ್ಕಾರಗಳೊಂದಿಗೆ ಬುಧವಾರ ಆಚರಿಸಲಾಯಿತು.</p>.<p>ಅನೇಕ ಜನರು ಕುಟುಂಬ ಸಮೇತರಾಗಿ ಕೃಷ್ಣಾನದಿ ಹಾಗೂ ತುಂಗಭದ್ರಾ ನದಿತೀರಗಳಿಗೆ ಹೋಗಿ ಪುಣ್ಯಸ್ನಾನ ಮಾಡಿಕೊಂಡು ಸೂರ್ಯದೇವನಿಗೆ ಪೂಜೆ ಸಲ್ಲಿಸಿದರು. ಉತ್ತರೋತ್ತರ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಿದರು. ನದಿತೀರಗಳಲ್ಲಿ ಕುಳಿತು ಮನೆಯಿಂದ ತೆಗೆದುಕೊಂಡು ಹೋಗಿದ್ದ ವಿಶೇಷ ಭಕ್ಷ್ಯ, ಭೋಜನಗಳನ್ನು ಸವಿದರು.</p>.<p>ತರಹೇವಾರಿ ತರಕಾರಿ ಪಲ್ಲೆಗಳು, ಸಜ್ಜಿರೊಟ್ಟಿ, ಹೋಳಿಗೆ ಸವಿಯಾದ ಊಟವನ್ನು ಸವಿದರು. ಕೆಲವು ಸಂಘ–ಸಂಸ್ಥೆಗಳು ಸಾಮೂಹಿಕವಾಗಿ ಸಂಕ್ರಮಣ ಆಚರಣೆ ಏರ್ಪಡಿಸಿದ್ದು ವಿಶೇಷವಾಗಿತ್ತು. ಮಕ್ಕಳು ಗಾಳಿಪಟ ಹಾರಿಸಿ ಖುಷಿ ಪಟ್ಟರು. ಪ್ರತಿ ಮನೆಗಳ ಎದುರು ಚಿತ್ತಾಕರ್ಷಕ ರಂಗೋಲಿ, ತಳಿರು ತೋರಣಗಳು ಹಬ್ಬದ ಸಡಗರವನ್ನು ಇಮ್ಮಡಿಸಿದವು.</p>.<p>ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜುನಿಯರ್ ಕ್ಲಬ್ ಇಂಟರ್ನ್ಯಾಷನಲ್ (ಜೆಸಿಐ) ಪದಾಧಿಕಾರಿಗಳು ಕುಟುಂಬ ಸಮೇತರಾಗಿ ಒಟ್ಟಾಗಿ ಸಂಕ್ರಮಣ ಆಚರಿಸಿ ಸಂಭ್ರಮಿಸಿದರು. ಮಕ್ಕಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಯರಮರಸ್ನಲ್ಲಿರುವ ಗೋಲ್ಡ್ನ್ ಗ್ಲೋಬಲ್ ಪಬ್ಲಿಕ್ ಶಾಲೆಯಲ್ಲಿ ಸಂಕ್ರಮಣ ಆಚರಣೆ ಏರ್ಪಡಿಸಲಾಗಿತ್ತು.</p>.<p>ಕ್ರೀಡಾಂಗಣದಲ್ಲಿ ವಿಶಾಲವಾಗಿ ಬಿಡಿಸಿದ್ದ ರಂಗೋಲಿ ಮನ ಸೆಳೆಯುವಂತಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ಜಿಲ್ಲೆಯಾದ್ಯಂತ ಮಕರಣ ಸಂಕ್ರಮಣ ಹಬ್ಬವನ್ನು ಸಂಭ್ರಮ, ಸಡಗರ ಹಾಗೂ ವಿಶೇಷ ಪೂಜೆಪುನಸ್ಕಾರಗಳೊಂದಿಗೆ ಬುಧವಾರ ಆಚರಿಸಲಾಯಿತು.</p>.<p>ಅನೇಕ ಜನರು ಕುಟುಂಬ ಸಮೇತರಾಗಿ ಕೃಷ್ಣಾನದಿ ಹಾಗೂ ತುಂಗಭದ್ರಾ ನದಿತೀರಗಳಿಗೆ ಹೋಗಿ ಪುಣ್ಯಸ್ನಾನ ಮಾಡಿಕೊಂಡು ಸೂರ್ಯದೇವನಿಗೆ ಪೂಜೆ ಸಲ್ಲಿಸಿದರು. ಉತ್ತರೋತ್ತರ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಿದರು. ನದಿತೀರಗಳಲ್ಲಿ ಕುಳಿತು ಮನೆಯಿಂದ ತೆಗೆದುಕೊಂಡು ಹೋಗಿದ್ದ ವಿಶೇಷ ಭಕ್ಷ್ಯ, ಭೋಜನಗಳನ್ನು ಸವಿದರು.</p>.<p>ತರಹೇವಾರಿ ತರಕಾರಿ ಪಲ್ಲೆಗಳು, ಸಜ್ಜಿರೊಟ್ಟಿ, ಹೋಳಿಗೆ ಸವಿಯಾದ ಊಟವನ್ನು ಸವಿದರು. ಕೆಲವು ಸಂಘ–ಸಂಸ್ಥೆಗಳು ಸಾಮೂಹಿಕವಾಗಿ ಸಂಕ್ರಮಣ ಆಚರಣೆ ಏರ್ಪಡಿಸಿದ್ದು ವಿಶೇಷವಾಗಿತ್ತು. ಮಕ್ಕಳು ಗಾಳಿಪಟ ಹಾರಿಸಿ ಖುಷಿ ಪಟ್ಟರು. ಪ್ರತಿ ಮನೆಗಳ ಎದುರು ಚಿತ್ತಾಕರ್ಷಕ ರಂಗೋಲಿ, ತಳಿರು ತೋರಣಗಳು ಹಬ್ಬದ ಸಡಗರವನ್ನು ಇಮ್ಮಡಿಸಿದವು.</p>.<p>ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜುನಿಯರ್ ಕ್ಲಬ್ ಇಂಟರ್ನ್ಯಾಷನಲ್ (ಜೆಸಿಐ) ಪದಾಧಿಕಾರಿಗಳು ಕುಟುಂಬ ಸಮೇತರಾಗಿ ಒಟ್ಟಾಗಿ ಸಂಕ್ರಮಣ ಆಚರಿಸಿ ಸಂಭ್ರಮಿಸಿದರು. ಮಕ್ಕಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಯರಮರಸ್ನಲ್ಲಿರುವ ಗೋಲ್ಡ್ನ್ ಗ್ಲೋಬಲ್ ಪಬ್ಲಿಕ್ ಶಾಲೆಯಲ್ಲಿ ಸಂಕ್ರಮಣ ಆಚರಣೆ ಏರ್ಪಡಿಸಲಾಗಿತ್ತು.</p>.<p>ಕ್ರೀಡಾಂಗಣದಲ್ಲಿ ವಿಶಾಲವಾಗಿ ಬಿಡಿಸಿದ್ದ ರಂಗೋಲಿ ಮನ ಸೆಳೆಯುವಂತಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>