ಮಾನವಿಯತೆಯ, ಸಮಾನತೆಯ ಹರಿಕಾರ ಶ್ರೀ ನಾರಾಯಣ ಗುರುಗಳ ಸ್ಮರಣಾರ್ಥವಾಗಿ 'ನಾರಾಯಣ ಗುರು ವಸತಿ ಶಾಲೆ'ಗಳನ್ನು ಪ್ರಾರಂಭಿಸುವದಾಗಿ ರಾಜ್ಯ ಸರ್ಕಾರ 2022-23ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಾರಂಭಿಸಲು ಆದೇಶಿಸಲಾಗಿದೆ. ಹಿಂದುಳಿದ ವರ್ಗಗಳ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಂತೆ ಅನುಕೂಲವಾಗಲಿದೆ.