ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮರಳು ಅಕ್ರಮ ಸಾಗಣೆ ಆರೋಪ ಇರುವವರ ಜೊತೆ ಪೊಲೀಸ್ ಇನ್‌ಸ್ಪೆಕ್ಟರ್: ಹರಿದಾಡಿದ ಫೋಟೊ

Published 14 ಮೇ 2024, 15:47 IST
Last Updated 14 ಮೇ 2024, 15:47 IST
ಅಕ್ಷರ ಗಾತ್ರ

ದೇವದುರ್ಗ: ತಾಲ್ಲೂಕಿನ ಬೆಣಕಲ್ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಮರಳು ಅಕ್ರಮ ಸಾಗಣೆ ಆರೋಪ ಇರುವವರ ಜೊತೆ ರಾತ್ರಿ ವೇಳೆ ದೇವದುರ್ಗ ಪೊಲೀಸ್ ಇನ್‌ಸ್ಪೆಕ್ಟರ್ ಅಶೋಕ ಸದಲಗಿ ಅವರು ಕಾಣಿಸಿಕೊಂಡ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಫೋಟೊವನ್ನು ಶಾಸಕಿ ಕರೆಮ್ಮ ಜಿ.ನಾಯಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪೊಲೀಸರ ವಿರುದ್ಧ ಕ್ರಮಕ್ಕೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೆಟ್ಟಿಗರು ಮರಳು ಅಕ್ರಮವಾಗಿ ಸಾಗಿಸುವವರ ಜೊತೆಗೆ ಪೊಲೀಸರು ಶಾಮೀಲಾಗಿದ್ದಾರೆ. ಆರಕ್ಷಕರು ಅಕ್ರಮ ಚಟುವಟಿಕೆದಾರರ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT