ನಿಷ್ಪಲವಾದ ನಿಯೋಗಗಳು: ಮಠಾಧೀಶರು ಸೇರಿ ಈ ಭಾಗದ ಜನಪ್ರತಿನಿಧಿಗಳು ಮೂರು ಬಾರಿ ನಿಯೋಗದೊಂದಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನಡೆಸಿದ ಮಾತುಕತೆಯೂ ಫಲಪ್ರದವಾಗಲಿಲ್ಲ. ಚಿಕ್ಕೋಡಿ ಜಿಲ್ಲೆ ರಚನೆಯಾಗುತ್ತದೆ ಎಂಬ ವಿಶ್ವಾಸದೊಂದಿಗೆ ಸತ್ಯಾಗ್ರಹ ಮುಂದುವರಿಸಿದ ಹೋರಾಟಗಾರರಿಗೆ ಚುನಾವಣೆ ದಿನಾಂಕ ಪ್ರಕಟಣೆ ಸುದ್ದಿ ನಿರಾಸೆ ಮೂಡಿಸಿತು. ನೀತಿ ಸಂಹಿತೆ ಜಾರಿಯಿಂದಾಗಿ ಜಿಲ್ಲಾ ಘೋಷಣೆ ಸಾಧ್ಯವಾಗದ ಮಾತಾಗಿರುವ ಕಾರಣ ತಾತ್ಕಾಲಿಕವಾಗಿ ಹೋರಾಟ ಸ್ಥಗಿತಗೊಳಿಸಲು ತೀರ್ಮಾನಿಸಲಾಯಿತು.