<p><strong>ಹಟ್ಟಿ ಚಿನ್ನದ ಗಣಿ</strong>: ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ತೊಗರಿ ಬೆಳೆಗೆ ಗೊಡ್ಡು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.</p>.<p>ಗೌಡೂರು, ಪೈದೊಡ್ಡಿ, ಯಜರಂತಿ, ಬಂಡೆಭಾವಿ, ಮಾಚನೂರು, ಯಲಗಟ್ಟಾ, ಗದ್ದಿಗಿ ತಾಂಡಾ, ಗುರುಗುಂಟಾ, ಕೋಠಾ, ಮೇದಿನಾಪುರ, ನಿಲೋಗಲ್, ವೀರಾಪುರ, ಆನ್ವರಿ, ಗೆಜ್ಜಲಗಟ್ಟಾ ಸೇರಿದಂತೆ ಇತರೆ ಗ್ರಾಮದಲ್ಲಿ ಸೂಮಾರು 1,450 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದೆ.</p>.<p>ರೈತರು ಬೆಳೆದ ಹತ್ತಿ, ಸೂರ್ಯಕಾಂತಿ, ಸಜ್ಜೆ, ಎಳ್ಳು ಸೇರಿದಂತೆ ಇತರೆ ಬೆಳೆಗಳು ಅತಿವೃಷ್ಟಿಯಿಂದಾಗಿ ಹಾನಿಯಾಗಿವೆ. ಉಳಿದ ಅಲ್ಪಸ್ವಲ್ಪ ತೊಗರಿ ಬೆಳೆಗೂ ಇದೀಗ ಗೊಡ್ಡು ರೋಗ ಬಂದಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ ಎನ್ನುತ್ತಾರೆ ಗೌಡೂರು ಗ್ರಾಮದ ರೈತರು.</p>.<p>ರೋಗ ಸೊಂಕಿತ ಗಿಡಗಳು ಹೂವು ಬಿಡುವುದಿಲ್ಲ. ತಡವಾಗಿ ರೋಗ ತಗುಲಿದ ಗಿಡಗಳು ಹೂವು ಬಿಟ್ಟರೂ ಕಾಯಿ ಕಟ್ಟುವುದಿಲ್ಲ. ಕೆಲವು ಕಾಯಿ ಬಿಟ್ಟರೂ ಬಲಿಯುವುದಿಲ್ಲ. ರೋಗ ಹತೋಟಿಗೆ ತರಲು ಔಷಧ ಸಿಂಪಡಣೆ ಮಾಡಿದರೂ ಪ್ರಯೋಜವಾಗುತ್ತಿಲ್ಲ. ಇದರಿಂದ ತೊಗರಿ ಇಳುವರಿ ಕುಠಿತವಾಗಲಿದೆ ಎನ್ನುತ್ತಾರೆ ರೈತರು.</p>.<p>ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದು, ತೊಗರಿ ಕಾಯಿ ಕಟ್ಟುವ ಹಂತದಲ್ಲಿ ರೋಗದ ಭೀತಿ ಎದುರಿಸುವಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ರೈತರ ನೆರವಿಗೆ ಧಾವಿಸಿ ಪರಿಹಾರ ಒದಗಿಸಲು ಮುಂದಾಗಬೇಕು ಎನ್ನುವುದು ರೈತರ ಒತ್ತಾಯವಾಗಿದೆ.</p>.<p>ಗುರುಗುಂಟಾ ರೈತ ಸಂಪರ್ಕ ಕೇಂದ್ರದಿಂದ ವಿತರಿಸಿದ ತೊಗರಿ ಬಿತ್ತನೆ ಬೀಜ ಕಳಪೆಯಾಗಿದೆ. ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ತಜ್ಞರು ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><blockquote>ಜನಪ್ರತಿನಿಧಿಗಳು ಅಧಿಕಾರಿಗಳು ರೈತರ ಸಮಸ್ಯೆಗೆ ಸ್ಪಂದಿಸಬೇಕು. ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಹೋರಾಟ ನಡೆಸಬೇಕಾಗುತ್ತದೆ.</blockquote><span class="attribution">– ಕ್ಯಾತನಗೌಡ, ಮಾಚನೂರು ರೈತ</span></div>.<div><blockquote>ತೊಗರಿ ಬೆಳೆಗೆ ಗೊಡ್ಡು ರೋಗ ತಗುಲಿದ್ದು ಸಂಬಂಧಿಸಿದ ಅಧಿಕಾರಿಗಳು ರೈತರ ನೆರವಿಗ ಬರಬೇಕು.</blockquote><span class="attribution">– ಬಸವರಾಜ ಗೌಡೂರು, ಪ್ರಧಾನ ಕಾರ್ಯದರ್ಶಿ ರಾಜ್ಯ ರೈತ ಸಂಘ ಹಸಿರು ಸೇನೆ</span></div>.<div><blockquote>ರೈತರು ಆತಂಕ ಪಡೆದೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು.</blockquote><span class="attribution">– ಹನುಮಂತ ರಾಠೋಡ, ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ ಗುರುಗುಂಟಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong>: ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ತೊಗರಿ ಬೆಳೆಗೆ ಗೊಡ್ಡು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.</p>.<p>ಗೌಡೂರು, ಪೈದೊಡ್ಡಿ, ಯಜರಂತಿ, ಬಂಡೆಭಾವಿ, ಮಾಚನೂರು, ಯಲಗಟ್ಟಾ, ಗದ್ದಿಗಿ ತಾಂಡಾ, ಗುರುಗುಂಟಾ, ಕೋಠಾ, ಮೇದಿನಾಪುರ, ನಿಲೋಗಲ್, ವೀರಾಪುರ, ಆನ್ವರಿ, ಗೆಜ್ಜಲಗಟ್ಟಾ ಸೇರಿದಂತೆ ಇತರೆ ಗ್ರಾಮದಲ್ಲಿ ಸೂಮಾರು 1,450 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದೆ.</p>.<p>ರೈತರು ಬೆಳೆದ ಹತ್ತಿ, ಸೂರ್ಯಕಾಂತಿ, ಸಜ್ಜೆ, ಎಳ್ಳು ಸೇರಿದಂತೆ ಇತರೆ ಬೆಳೆಗಳು ಅತಿವೃಷ್ಟಿಯಿಂದಾಗಿ ಹಾನಿಯಾಗಿವೆ. ಉಳಿದ ಅಲ್ಪಸ್ವಲ್ಪ ತೊಗರಿ ಬೆಳೆಗೂ ಇದೀಗ ಗೊಡ್ಡು ರೋಗ ಬಂದಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ ಎನ್ನುತ್ತಾರೆ ಗೌಡೂರು ಗ್ರಾಮದ ರೈತರು.</p>.<p>ರೋಗ ಸೊಂಕಿತ ಗಿಡಗಳು ಹೂವು ಬಿಡುವುದಿಲ್ಲ. ತಡವಾಗಿ ರೋಗ ತಗುಲಿದ ಗಿಡಗಳು ಹೂವು ಬಿಟ್ಟರೂ ಕಾಯಿ ಕಟ್ಟುವುದಿಲ್ಲ. ಕೆಲವು ಕಾಯಿ ಬಿಟ್ಟರೂ ಬಲಿಯುವುದಿಲ್ಲ. ರೋಗ ಹತೋಟಿಗೆ ತರಲು ಔಷಧ ಸಿಂಪಡಣೆ ಮಾಡಿದರೂ ಪ್ರಯೋಜವಾಗುತ್ತಿಲ್ಲ. ಇದರಿಂದ ತೊಗರಿ ಇಳುವರಿ ಕುಠಿತವಾಗಲಿದೆ ಎನ್ನುತ್ತಾರೆ ರೈತರು.</p>.<p>ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದು, ತೊಗರಿ ಕಾಯಿ ಕಟ್ಟುವ ಹಂತದಲ್ಲಿ ರೋಗದ ಭೀತಿ ಎದುರಿಸುವಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ರೈತರ ನೆರವಿಗೆ ಧಾವಿಸಿ ಪರಿಹಾರ ಒದಗಿಸಲು ಮುಂದಾಗಬೇಕು ಎನ್ನುವುದು ರೈತರ ಒತ್ತಾಯವಾಗಿದೆ.</p>.<p>ಗುರುಗುಂಟಾ ರೈತ ಸಂಪರ್ಕ ಕೇಂದ್ರದಿಂದ ವಿತರಿಸಿದ ತೊಗರಿ ಬಿತ್ತನೆ ಬೀಜ ಕಳಪೆಯಾಗಿದೆ. ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ತಜ್ಞರು ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><blockquote>ಜನಪ್ರತಿನಿಧಿಗಳು ಅಧಿಕಾರಿಗಳು ರೈತರ ಸಮಸ್ಯೆಗೆ ಸ್ಪಂದಿಸಬೇಕು. ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಹೋರಾಟ ನಡೆಸಬೇಕಾಗುತ್ತದೆ.</blockquote><span class="attribution">– ಕ್ಯಾತನಗೌಡ, ಮಾಚನೂರು ರೈತ</span></div>.<div><blockquote>ತೊಗರಿ ಬೆಳೆಗೆ ಗೊಡ್ಡು ರೋಗ ತಗುಲಿದ್ದು ಸಂಬಂಧಿಸಿದ ಅಧಿಕಾರಿಗಳು ರೈತರ ನೆರವಿಗ ಬರಬೇಕು.</blockquote><span class="attribution">– ಬಸವರಾಜ ಗೌಡೂರು, ಪ್ರಧಾನ ಕಾರ್ಯದರ್ಶಿ ರಾಜ್ಯ ರೈತ ಸಂಘ ಹಸಿರು ಸೇನೆ</span></div>.<div><blockquote>ರೈತರು ಆತಂಕ ಪಡೆದೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು.</blockquote><span class="attribution">– ಹನುಮಂತ ರಾಠೋಡ, ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ ಗುರುಗುಂಟಾ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>