‘ಅಭಿಯಾನದಲ್ಲಿ ಜನರಿಂದ ಸ್ಥಳದಲ್ಲೇ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಮಾಸಾಶನ ಬಿಡುಗಡೆಗೆ ಅಗತ್ಯವಾಗುವ ದಾಖಲೆಗಳನ್ನು ಸ್ಥಳದಲ್ಲೇ ಸ್ಕ್ಯಾನಿಂಗ್ ಮಾಡುವುದು, ಅಪ್ಲೋಡ್ ಮಾಡುವುದು, ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಬ್ಯಾಂಕ್ ಖಾತೆ ಇಲ್ಲದವರ ಅರ್ಜಿಗಳ ವಿಲೇವಾರಿ ಮಾತ್ರ ಬಾಕಿ ಉಳಿಸಿಕೊಂಡು, ಆನಂತರ ವಿಲೇವಾರಿ ಮಾಡಲಾಗುತ್ತದೆ’ ಎಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.