ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಇಂತಹ ಅದಾಲತ್ ಏರ್ಪಡಿಸಲಾಗಿದೆ. ಇನ್ನುಳಿದಂತೆ ಯಾವುದೇ ಸಮಸ್ಯೆಗಳಿಗೆ ನೇರವಾಗಿ ಸಿರವಾರ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಬೇಕು ಎಂದು ಹೇಳಿದರು.
ಉಪ ತಹಶೀಲ್ದಾರ್ ಸ್ವಾಮಿ ವಿವೇಕಾನಂದ, ನವಲಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಲ್ಲನಗೌಡ ಮುರ್ಕಿಗುಡ್ಡ, ಗ್ರಾಮ ಲೆಕ್ಕಾಧಿಕಾರಿ ನಾಗೇಂದ್ರ, ಶಿಕ್ಷಕ ಗೋಪಾಲದಾಸ್ ಮತ್ತು ಮಲ್ಲಟ, ಬಾಗಲವಾಡ, ಮುರ್ಕಿಗುಡ್ಡ, ನವಲಕಲ್ಲು ಸೇರಿ ವಿವಿಧ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿದ್ದರು.