ಪ್ರವಾಹದಿಂದ ಸರ್ಕಾರಿ ಶಾಲೆ, ರಸ್ತೆ, ಮನೆ, ಸೇತುವೆ, ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಹಾನಿಯಾಗಿವೆ. ಈ ಬಗ್ಗೆ ಮೂರು ಭಾಗಗಳಲ್ಲಿ ವಿಂಗಡಿಸಿ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಸೂಚನೆ ನೀಡಿದ್ದರು. ಅದರಂತೆ, ಬೆಳೆ ಹಾನಿಯ ಕುರಿತು ಈ ಹಿಂದೆ ನಡೆಸಿದ ಸಮೀಕ್ಷೆಯ ತಂಡದಿಂದಲೇ ಸಮೀಕ್ಷೆ ಮಾಡುವುದಕ್ಕಾಗಿ ಶೀಘ್ರದಲ್ಲಿ ಸಭೆ ಕರೆದು ಚರ್ಚಿಸಿ ಸಮೀಕ್ಷೆಯನ್ನು ಪ್ರಾರಂಭಿಸಲಾಗುವುದು ಎಂದರು.