<p><strong>ಮಾನ್ವಿ</strong>: ‘ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಡಿಮೆ ಮಾಡಿ, ಪರಿಸರಕ್ಕೆ ಪೂರಕವಾದ ವಸ್ತುಗಳಿಂದ ತಯಾರಿಸಿದ ವಸ್ತುಗಳನ್ನು ಹೆಚ್ಚಾಗಿ ಬಳಸಬೇಕು’ ಅರಣ್ಯಾಧಿಕಾರಿ ಕೆಂಚಪ್ಪ ಹಂಚಿನಾಳ್ ಎಂದು ಹೇಳಿದರು.</p>.<p>ಪಟ್ಟಣದ ಲೊಯೋಲ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಲೊಯೋಲ ಸಮಾಜ ಸೇವಾ ಕೇಂದ್ರ ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br> ' ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ. ಈ ನಿಟ್ಟಿನಲ್ಲಿ ಜನಜಾಗೃತಿ ಅಗತ್ಯ' ಎಂದರು.</p>.<p>ರಾಜ್ಯ ಸಂಪನ್ಮೂಲ ವ್ಯಕ್ತಿಗ ಸಿ.ಪಿ.ಓದಿಸೋಮಠ ಅವರು 'ಶಾಲಾ ಶಿಕ್ಷಣದಲ್ಲಿ ಸಮುದಾಯದ ಭಾಗವಹಿಸುವಿಕೆ ಹಾಗೂ ಎಸ್.ಡಿ.ಎಮ್.ಸಿಗಳ ಪಾತ್ರ' ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಫಾದರ್ ಮ್ಯಾಕ್ಸಿಂ ರಸ್ಕೀನ್ಹಾ ಎಸ್.ಜೆ. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಲೊಯೋಲ ಸಮಾಜ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಫಾದರ್ ಜಾರ್ಜ್ ಎಸ್.ಜೆ, ಲೊಯೋಲ ಪದವಿ ಪೂರ್ವ ಕಾಲೇಜ ಪ್ರಾಚಾರ್ಯ ಫಾದರ್ ಪ್ರವೀಣ್ ಕುಮಾರ, ಎಸ್.ಜೆ. ಜನಶಕ್ತಿ ಒಕ್ಕೂಟದ ಅಧ್ಯಕ್ಷೆ ಗಂಗಮ್ಮ, ಎನ್.ಬಸವರಾಜ, ಏಲಿಯಾಸ್ ಹಾಗೂ ತಾಲೂಕಿನ ವಿವಿಧ ಗ್ರಾಮಗಂಳಿಂದ ಆಗಮಿಸಿದ್ದ ಸ್ವ-ಸಹಾಯ ಸಂಘದ ಪ್ರತಿನಿಧಿಗಳು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ</strong>: ‘ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಡಿಮೆ ಮಾಡಿ, ಪರಿಸರಕ್ಕೆ ಪೂರಕವಾದ ವಸ್ತುಗಳಿಂದ ತಯಾರಿಸಿದ ವಸ್ತುಗಳನ್ನು ಹೆಚ್ಚಾಗಿ ಬಳಸಬೇಕು’ ಅರಣ್ಯಾಧಿಕಾರಿ ಕೆಂಚಪ್ಪ ಹಂಚಿನಾಳ್ ಎಂದು ಹೇಳಿದರು.</p>.<p>ಪಟ್ಟಣದ ಲೊಯೋಲ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಲೊಯೋಲ ಸಮಾಜ ಸೇವಾ ಕೇಂದ್ರ ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br> ' ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ. ಈ ನಿಟ್ಟಿನಲ್ಲಿ ಜನಜಾಗೃತಿ ಅಗತ್ಯ' ಎಂದರು.</p>.<p>ರಾಜ್ಯ ಸಂಪನ್ಮೂಲ ವ್ಯಕ್ತಿಗ ಸಿ.ಪಿ.ಓದಿಸೋಮಠ ಅವರು 'ಶಾಲಾ ಶಿಕ್ಷಣದಲ್ಲಿ ಸಮುದಾಯದ ಭಾಗವಹಿಸುವಿಕೆ ಹಾಗೂ ಎಸ್.ಡಿ.ಎಮ್.ಸಿಗಳ ಪಾತ್ರ' ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಫಾದರ್ ಮ್ಯಾಕ್ಸಿಂ ರಸ್ಕೀನ್ಹಾ ಎಸ್.ಜೆ. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಲೊಯೋಲ ಸಮಾಜ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಫಾದರ್ ಜಾರ್ಜ್ ಎಸ್.ಜೆ, ಲೊಯೋಲ ಪದವಿ ಪೂರ್ವ ಕಾಲೇಜ ಪ್ರಾಚಾರ್ಯ ಫಾದರ್ ಪ್ರವೀಣ್ ಕುಮಾರ, ಎಸ್.ಜೆ. ಜನಶಕ್ತಿ ಒಕ್ಕೂಟದ ಅಧ್ಯಕ್ಷೆ ಗಂಗಮ್ಮ, ಎನ್.ಬಸವರಾಜ, ಏಲಿಯಾಸ್ ಹಾಗೂ ತಾಲೂಕಿನ ವಿವಿಧ ಗ್ರಾಮಗಂಳಿಂದ ಆಗಮಿಸಿದ್ದ ಸ್ವ-ಸಹಾಯ ಸಂಘದ ಪ್ರತಿನಿಧಿಗಳು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>