<p><strong>ರಾಯಚೂರು:</strong> ಮಹಾನಗರ ಪಾಲಿಕೆ ವತಿಯಿಂದ ಲೀಡ್ ಬ್ಯಾಂಕ್ ಹಾಗೂ ಎಸ್ಬಿಐ ಸಹಯೋಗದಲ್ಲಿ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಬೀದಿ ಹಾಗೂ ಸಣ್ಣ ವ್ಯಾಪಾರಿಗಳಿಗಾಗಿ ಸಾಲ ಮೇಳ ಆಯೋಜಿಸಲಾಯಿತು.</p>.<p>ಈ ಕಾರ್ಯಕ್ರಮದ ಉದ್ದೇಶ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿ ಜೀವನೋಪಾಯಕ್ಕೆ ಅಗತ್ಯವಾದ ಆರ್ಥಿಕ ಸಹಾಯ ಒದಗಿಸುವುದಾಗಿದ್ದು, ಸರ್ಕಾರದ ಈ ಮಹತ್ವದ ಯೋಜನೆಯ ಬಗ್ಗೆ ಅರಿವು ಮೂಡಿಸುವುದಾಗಿದೆ. ಸುಮಾರು 200 ಫಲಾನುಭವಿಗಳು ಭಾಗವಹಿಸಿದ್ದರು. ಇದರಲ್ಲಿ ಸುಮಾರು 50 ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಸಾಲ ಮಂಜೂರು ಮಾಡಿ ದೃಢೀಕರಿಸಲಾಯಿತು. ಸ್ವೀಕೃತಿಯಾದ ಎಲ್ಲಾ ಅರ್ಜಿಗಳನ್ನು ನಾಳೆಯೊಳಗೆ ಸಾಲ ಮಂಜೂರು ಮಾಡಲಾಗುವುದು ಎಂದು ಪ್ರಾದೇಶಿಕ ವ್ಯವಸ್ಥಾಪಕಿ ಸೀತಾಬಾಯಿ ಹೇಳಿದರು.</p>.<p>ಲೀಡ್ ಬ್ಯಾಂಕ್ ಮ್ಯಾನೇಜರ್ ಸುಧೀಂದ್ರ, ಪಾಲಿಕೆ ಅಧಿಕಾರಿ ಕೃಷ್ಣ ಶಾವಂತಗೇರಿ, ಸಂತೋಷ ರಾಣಿ, ಸುರೇಶ ವಿಭೂತಿಮಠ, ಆನಂದ ವಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಹಾನಗರ ಪಾಲಿಕೆ ವತಿಯಿಂದ ಲೀಡ್ ಬ್ಯಾಂಕ್ ಹಾಗೂ ಎಸ್ಬಿಐ ಸಹಯೋಗದಲ್ಲಿ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಬೀದಿ ಹಾಗೂ ಸಣ್ಣ ವ್ಯಾಪಾರಿಗಳಿಗಾಗಿ ಸಾಲ ಮೇಳ ಆಯೋಜಿಸಲಾಯಿತು.</p>.<p>ಈ ಕಾರ್ಯಕ್ರಮದ ಉದ್ದೇಶ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿ ಜೀವನೋಪಾಯಕ್ಕೆ ಅಗತ್ಯವಾದ ಆರ್ಥಿಕ ಸಹಾಯ ಒದಗಿಸುವುದಾಗಿದ್ದು, ಸರ್ಕಾರದ ಈ ಮಹತ್ವದ ಯೋಜನೆಯ ಬಗ್ಗೆ ಅರಿವು ಮೂಡಿಸುವುದಾಗಿದೆ. ಸುಮಾರು 200 ಫಲಾನುಭವಿಗಳು ಭಾಗವಹಿಸಿದ್ದರು. ಇದರಲ್ಲಿ ಸುಮಾರು 50 ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಸಾಲ ಮಂಜೂರು ಮಾಡಿ ದೃಢೀಕರಿಸಲಾಯಿತು. ಸ್ವೀಕೃತಿಯಾದ ಎಲ್ಲಾ ಅರ್ಜಿಗಳನ್ನು ನಾಳೆಯೊಳಗೆ ಸಾಲ ಮಂಜೂರು ಮಾಡಲಾಗುವುದು ಎಂದು ಪ್ರಾದೇಶಿಕ ವ್ಯವಸ್ಥಾಪಕಿ ಸೀತಾಬಾಯಿ ಹೇಳಿದರು.</p>.<p>ಲೀಡ್ ಬ್ಯಾಂಕ್ ಮ್ಯಾನೇಜರ್ ಸುಧೀಂದ್ರ, ಪಾಲಿಕೆ ಅಧಿಕಾರಿ ಕೃಷ್ಣ ಶಾವಂತಗೇರಿ, ಸಂತೋಷ ರಾಣಿ, ಸುರೇಶ ವಿಭೂತಿಮಠ, ಆನಂದ ವಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>