<p><strong>ರಾಯಚೂರು:</strong> ‘ಕಾವ್ಯವು ಸಮಾಜದಲ್ಲಿ ಮಾನವೀಯ ಮೌಲ್ಯ ಹಾಗೂ ಸೌಹಾರ್ದತೆಯನ್ನು ಬೆಳೆಸುವ ಬಲಿಷ್ಠ ಅಸ್ತ್ರವಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ಅಭಿಪ್ರಾಯಪಟ್ಟರು.</p>.<p>ನಗರದ ಮಹಿಳಾ ಸಮಾಜ ಆವರಣದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಪ್ರಯುಕ್ತ ಆಯೋಜಿಸಿದ್ದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಯಚೂರು ಜಿಲ್ಲೆಯ ಕಾವ್ಯ ಪರಂಪರೆ ಅತ್ಯಂತ ಶ್ರೀಮಂತವಾಗಿದೆ. ಇತ್ತೀಚಿನ ದಿನಗಳಲ್ಲಿ ಹಿರಿಯರು, ಕಿರಿಯರು ತಮ್ಮ ಕಾವ್ಯ ಸೃಜನಶೀಲತೆಯ ಕಾವ್ಯದ ಮೂಲಕ ರಾಜ್ಯದ ಗಮನ ಸೆಳೆಯುತ್ತಿರುವುದು ಸಂತಸದ ಸಂಗತಿಯಾಗಿದೆ’ ಎಂದು ತಿಳಿಸಿದರು.</p>.<p>ಕವಿ ಗೋಷ್ಠಿಯಲ್ಲಿ 75 ಕವಿಗಳು ತಮ್ಮ ಕಾವ್ಯ ವಾಚನ ಮಾಡುವ ಮೂಲಕ ಎಡೆದೊರೆ ನಾಡು ರಾಯಚೂರು ಉತ್ಸವ ಸಾಹಿತ್ಯಿಕವಾಗಿ ಮತ್ತೊಂದು ಎತ್ತರವನ್ನು ತಲುಪಿಸುವ ಕಾರ್ಯ ಮಾಡಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಚಿದಾನಂದ ಸಾಲಿ ಮಾತನಾಡಿ, ‘ಗದ್ಯದಲ್ಲಿ ಬರೆದಿದ್ದನ್ನು, ಕತ್ತರಿಸಿ, ಪದಗಳನ್ನು ಜೋಡಿಸುತ್ತಹೋದರೆ ಅದು ಕವಿತೆ ಆಗುತ್ತದೆ ಎಂಬ ತಪ್ಪು ಗ್ರಹಿಕೆ ಕೆಲವರಲ್ಲಿದೆ. ಆದರೆ, ಗದ್ಯಕ್ಕೂ ಪದ್ಯಕ್ಕೂ ಇರುವ ಮುಖ್ಯ ವ್ಯತ್ಯಾಸವೆ ಕಾವ್ಯದ ಗುಣವಾಗಿದೆ‘ ಎಂದರು.</p>.<p>ಸಾಹಿತಿ ಗಿರಿರಾಜ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು.</p>.<p>ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಣ್ಣ ಬಿರಾದಾರ, ಹಿರಿಯ ಸಾಹಿತಿಗಳಾದ ಬಿ.ಜಿ ಹುಲಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ವಿಜಯರಾಜೇಂದ್ರ, ಎಚ್.ಎಫ್. ಮಸ್ಕಿ, ಚುನಾವಣಾ ವಿಭಾಗದ ತಹಶೀಲ್ದಾರ್ ಪರಶುರಾಮ ಉಪಸ್ಥಿತರಿದ್ದರು.<br /> ಅಣ್ಣಪ್ಪ ಮೇಟಿಗೌಡ ಹಾಗೂ ನಾಗಪ್ಪ ಹೊರಪ್ಯಾಟಿ ನಿರೂಪಿಸಿದರು. ರಾವುತ್ರಾವ್ ಬರೂರ ಸ್ವಾಗತಿಸಿದರು. ವಿಜಯಲಕ್ಷ್ಮಿ ಅಸ್ಕಿಹಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಕಾವ್ಯವು ಸಮಾಜದಲ್ಲಿ ಮಾನವೀಯ ಮೌಲ್ಯ ಹಾಗೂ ಸೌಹಾರ್ದತೆಯನ್ನು ಬೆಳೆಸುವ ಬಲಿಷ್ಠ ಅಸ್ತ್ರವಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ಅಭಿಪ್ರಾಯಪಟ್ಟರು.</p>.<p>ನಗರದ ಮಹಿಳಾ ಸಮಾಜ ಆವರಣದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಪ್ರಯುಕ್ತ ಆಯೋಜಿಸಿದ್ದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಯಚೂರು ಜಿಲ್ಲೆಯ ಕಾವ್ಯ ಪರಂಪರೆ ಅತ್ಯಂತ ಶ್ರೀಮಂತವಾಗಿದೆ. ಇತ್ತೀಚಿನ ದಿನಗಳಲ್ಲಿ ಹಿರಿಯರು, ಕಿರಿಯರು ತಮ್ಮ ಕಾವ್ಯ ಸೃಜನಶೀಲತೆಯ ಕಾವ್ಯದ ಮೂಲಕ ರಾಜ್ಯದ ಗಮನ ಸೆಳೆಯುತ್ತಿರುವುದು ಸಂತಸದ ಸಂಗತಿಯಾಗಿದೆ’ ಎಂದು ತಿಳಿಸಿದರು.</p>.<p>ಕವಿ ಗೋಷ್ಠಿಯಲ್ಲಿ 75 ಕವಿಗಳು ತಮ್ಮ ಕಾವ್ಯ ವಾಚನ ಮಾಡುವ ಮೂಲಕ ಎಡೆದೊರೆ ನಾಡು ರಾಯಚೂರು ಉತ್ಸವ ಸಾಹಿತ್ಯಿಕವಾಗಿ ಮತ್ತೊಂದು ಎತ್ತರವನ್ನು ತಲುಪಿಸುವ ಕಾರ್ಯ ಮಾಡಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಚಿದಾನಂದ ಸಾಲಿ ಮಾತನಾಡಿ, ‘ಗದ್ಯದಲ್ಲಿ ಬರೆದಿದ್ದನ್ನು, ಕತ್ತರಿಸಿ, ಪದಗಳನ್ನು ಜೋಡಿಸುತ್ತಹೋದರೆ ಅದು ಕವಿತೆ ಆಗುತ್ತದೆ ಎಂಬ ತಪ್ಪು ಗ್ರಹಿಕೆ ಕೆಲವರಲ್ಲಿದೆ. ಆದರೆ, ಗದ್ಯಕ್ಕೂ ಪದ್ಯಕ್ಕೂ ಇರುವ ಮುಖ್ಯ ವ್ಯತ್ಯಾಸವೆ ಕಾವ್ಯದ ಗುಣವಾಗಿದೆ‘ ಎಂದರು.</p>.<p>ಸಾಹಿತಿ ಗಿರಿರಾಜ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು.</p>.<p>ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಈರಣ್ಣ ಬಿರಾದಾರ, ಹಿರಿಯ ಸಾಹಿತಿಗಳಾದ ಬಿ.ಜಿ ಹುಲಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ವಿಜಯರಾಜೇಂದ್ರ, ಎಚ್.ಎಫ್. ಮಸ್ಕಿ, ಚುನಾವಣಾ ವಿಭಾಗದ ತಹಶೀಲ್ದಾರ್ ಪರಶುರಾಮ ಉಪಸ್ಥಿತರಿದ್ದರು.<br /> ಅಣ್ಣಪ್ಪ ಮೇಟಿಗೌಡ ಹಾಗೂ ನಾಗಪ್ಪ ಹೊರಪ್ಯಾಟಿ ನಿರೂಪಿಸಿದರು. ರಾವುತ್ರಾವ್ ಬರೂರ ಸ್ವಾಗತಿಸಿದರು. ವಿಜಯಲಕ್ಷ್ಮಿ ಅಸ್ಕಿಹಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>