ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಪದಿಪಾಡು ಗ್ರಾಮದ ಲಕ್ಷ್ಮಿಕಾಂತ ನಾಯಕ ಬಂಧಿತ ಆರೋಪಿ. ಗ್ರಾಮೀಣ ಠಾಣೆ ಮತ್ತು ಯರಗೇರಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಶೋಧ ಕಾರ್ಯದಲ್ಲಿ ತೊಡಗಿದ್ದರು. ಇನ್ನು ಇಬ್ಬರು ಆರೋಪಿಗಳಾದ ಮಲ್ಲೇಶ ನಾಯಕ, ಗೋಪಾಲ ನಾಯಕ ತಲೆಮರೆಸಿಕೊಂಡಿದ್ದು, ಶೋಧ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.