<p><strong>ರಾಯಚೂರು</strong>: ಲಾಕ್ಡೌನ್ ಜಾರಿ ಬಿಗಿಗೊಳಿಸಿರುವ ಪೊಲೀಸರು ಮಂಗಳವಾರದಿಂದ ಲಾಠಿ ಏಟಿನ ಬದಲಾಗಿ, ಅನಗತ್ಯ ಸಂಚಾರಿಗಳಿಗೆ ದಂಡ ವಿಧಿಸುವುದು ಮತ್ತು ವಾಹನಗಳನ್ನು ವಶಕ್ಕೆ ಪಡೆಯುವುದನ್ನು ವ್ಯಾಪಕಗೊಳಿಸಿದ್ದಾರೆ.</p>.<p>ಕೋವಿಡ್–19 ಎರಡನೇ ಅಲೆ ನಿಯಂತ್ರಣ ಕ್ರಮಗಳ ಜಾರಿಯು ಜನವರಿ 1 ರಿಂದ ಆರಂಭವಾಗಿದ್ದು, ಮೇ 10 ರವರೆಗೂ ಒಟ್ಟು 4,322 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೇ 10 ರಂದು ಒಂದೇ ದಿನ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 699 ಪ್ರಕರಣಗಳು , ಸಾಮಾಜಿಕ ಅಂತರ ಉಲ್ಲಂಘನೆ 4 ಪ್ರಕರಣಗಳನ್ನು ದಾಖಲಿಸಿ ಒಟ್ಟು ₹70,300 ದಂಡ ವಿಧಿಸಲಾಗಿದೆ. ಕರ್ನಾಟಕ ಮಹಾಮಾರಿ ಕಾಯ್ದೆ ಅಡಿಯಲ್ಲಿ 4 ಪ್ರಕರಣಗಳನ್ನು ದಾಖಲಿಸಿ ಅನಗತ್ಯ ಸಂಚರಿಸಿದ 643 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಅನವಶ್ಯಕವಾಗಿ ಸಂಚರಿಸುವ ವಾಹನಗಳನ್ನು ಜಪ್ತ ಮಾಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಿಸಲು ತೀರ್ಮಾನಿಸಲಾಗಿದೆ. ಜಪ್ತಿ ಮಾಡಿದ ವಾಹನವನ್ನು ನ್ಯಾಯಾಲಯ ಮುಖಾಂತರ ಬಿಡುಗಡೆ ಮಾಡಿಕೊಳ್ಳಬೇಕಾಗುವುದಲ್ಲದೇ , ಸಾರ್ವಜನಿಕರ ವಿರುದ್ಧ ದಾಖಲಾದ ಪ್ರಕರಣವು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು , ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕಾತ್ತದೆ. ಸಾರ್ವಜನಿಕರು ಜಾಗೃತಿ ವಹಿಸಲು ಮತ್ತು ಕೋವಿಡ್ -19 ನಿಯಂತ್ರಣ ಕುರಿತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜನವರಿ 1 ರಿಂದ ಏಪ್ರಿಲ್ 21 ರ ಅವಧಿಯಲ್ಲಿ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 7541 ಪ್ರಕರಣಗಳನ್ನು ದಾಖಲಿಸಿ ₹8,64,950 ದಂಡ ವಿಧಿಸಲಾಗಿತ್ತು. ಏಪ್ರಿಲ್ 22 ರಿಂದ ಮೇ 9 ಜನತಾ ಕರ್ಫ್ಯೂ ಅವಧಿಯಲ್ಲಿ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 8,004 ಪ್ರಕರಣಗಳನ್ನು ದಾಖಲಿಸಿ ₹8,24,250 ದಂಡ ವಿಧಿಸಲಾಗಿದೆ. ಅನಾವಶ್ಯಕವಾಗಿ ಸಂಚರಿಸಿದ ವಾಹನ ಸವಾರರ 3,200 - ದ್ವಿಚಕ್ರ ವಾಹನಗಳು , 351 - ನಾಲ್ಕು ಚಕ್ರ ವಾಹನಗಳು ಮತ್ತು 128 - ಇತರೇ ವಾಹನಗಳು ಸೇರಿ ಒಟ್ಟು 3679 ವಾಹನಗಳನ್ನು ಜಪ್ತಿ ಮಾಡಲಾಗಿದೆ.</p>.<p>ಕರ್ನಾಟಕ ಮಹಾಮಾರಿ ಕಾಯ್ದೆ ಅಡಿ 108 ಪ್ರಕರಣಗಳನ್ನು ದಾಖಲಿಸಿದ್ದು , ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ3 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಿದ್ದು, ಕೋವಿಡ್ -19 ನಿಯಮಾವಳಿ ಉಲ್ಲಂಘಿಸಿ ಹೆಚ್ಚಿನ ಪ್ರಮಾಣದಲ್ಲಿ ಒಂದೆಡೆ ಸೇರಿದ ಸಾರ್ವಜನಿಕರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಲಾಗಿದೆ.</p>.<p>ಸಾರ್ವಜನಿಕ ಸ್ಥಳದಲ್ಲಿ ಉಗುಳಿದ ಸಾರ್ವಜನಿಕರ ವಿರುದ್ಧ 610 ಪ್ರಕರಣಗಳನ್ನು ದಾಖಲಿಸಿದ್ದು , ಸಾರ್ವಜನಿಕರ ಸ್ಥಳದಲ್ಲಿ ಮಧ್ಯಪಾನ , ಗುಟಕಾ, ತಂಬಾಕು ಉತ್ಪನ್ನಗಳ ಸೇವನೆ ಮಾಡಿದ ಸಾರ್ವಜನಿಕರ ವಿರುದ್ಧ ಕೋಟ್ಟಾ ಕಾಯ್ದೆ ಅಡಿಯಲ್ಲಿ 608 ಪ್ರಕರಣಗಳನ್ನು ದಾಖಲಿಸಿ ಸ್ಥಳದಲ್ಲಿಯೇ ದಂಡ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಲಾಕ್ಡೌನ್ ಜಾರಿ ಬಿಗಿಗೊಳಿಸಿರುವ ಪೊಲೀಸರು ಮಂಗಳವಾರದಿಂದ ಲಾಠಿ ಏಟಿನ ಬದಲಾಗಿ, ಅನಗತ್ಯ ಸಂಚಾರಿಗಳಿಗೆ ದಂಡ ವಿಧಿಸುವುದು ಮತ್ತು ವಾಹನಗಳನ್ನು ವಶಕ್ಕೆ ಪಡೆಯುವುದನ್ನು ವ್ಯಾಪಕಗೊಳಿಸಿದ್ದಾರೆ.</p>.<p>ಕೋವಿಡ್–19 ಎರಡನೇ ಅಲೆ ನಿಯಂತ್ರಣ ಕ್ರಮಗಳ ಜಾರಿಯು ಜನವರಿ 1 ರಿಂದ ಆರಂಭವಾಗಿದ್ದು, ಮೇ 10 ರವರೆಗೂ ಒಟ್ಟು 4,322 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೇ 10 ರಂದು ಒಂದೇ ದಿನ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 699 ಪ್ರಕರಣಗಳು , ಸಾಮಾಜಿಕ ಅಂತರ ಉಲ್ಲಂಘನೆ 4 ಪ್ರಕರಣಗಳನ್ನು ದಾಖಲಿಸಿ ಒಟ್ಟು ₹70,300 ದಂಡ ವಿಧಿಸಲಾಗಿದೆ. ಕರ್ನಾಟಕ ಮಹಾಮಾರಿ ಕಾಯ್ದೆ ಅಡಿಯಲ್ಲಿ 4 ಪ್ರಕರಣಗಳನ್ನು ದಾಖಲಿಸಿ ಅನಗತ್ಯ ಸಂಚರಿಸಿದ 643 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಅನವಶ್ಯಕವಾಗಿ ಸಂಚರಿಸುವ ವಾಹನಗಳನ್ನು ಜಪ್ತ ಮಾಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಿಸಲು ತೀರ್ಮಾನಿಸಲಾಗಿದೆ. ಜಪ್ತಿ ಮಾಡಿದ ವಾಹನವನ್ನು ನ್ಯಾಯಾಲಯ ಮುಖಾಂತರ ಬಿಡುಗಡೆ ಮಾಡಿಕೊಳ್ಳಬೇಕಾಗುವುದಲ್ಲದೇ , ಸಾರ್ವಜನಿಕರ ವಿರುದ್ಧ ದಾಖಲಾದ ಪ್ರಕರಣವು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು , ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕಾತ್ತದೆ. ಸಾರ್ವಜನಿಕರು ಜಾಗೃತಿ ವಹಿಸಲು ಮತ್ತು ಕೋವಿಡ್ -19 ನಿಯಂತ್ರಣ ಕುರಿತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜನವರಿ 1 ರಿಂದ ಏಪ್ರಿಲ್ 21 ರ ಅವಧಿಯಲ್ಲಿ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 7541 ಪ್ರಕರಣಗಳನ್ನು ದಾಖಲಿಸಿ ₹8,64,950 ದಂಡ ವಿಧಿಸಲಾಗಿತ್ತು. ಏಪ್ರಿಲ್ 22 ರಿಂದ ಮೇ 9 ಜನತಾ ಕರ್ಫ್ಯೂ ಅವಧಿಯಲ್ಲಿ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 8,004 ಪ್ರಕರಣಗಳನ್ನು ದಾಖಲಿಸಿ ₹8,24,250 ದಂಡ ವಿಧಿಸಲಾಗಿದೆ. ಅನಾವಶ್ಯಕವಾಗಿ ಸಂಚರಿಸಿದ ವಾಹನ ಸವಾರರ 3,200 - ದ್ವಿಚಕ್ರ ವಾಹನಗಳು , 351 - ನಾಲ್ಕು ಚಕ್ರ ವಾಹನಗಳು ಮತ್ತು 128 - ಇತರೇ ವಾಹನಗಳು ಸೇರಿ ಒಟ್ಟು 3679 ವಾಹನಗಳನ್ನು ಜಪ್ತಿ ಮಾಡಲಾಗಿದೆ.</p>.<p>ಕರ್ನಾಟಕ ಮಹಾಮಾರಿ ಕಾಯ್ದೆ ಅಡಿ 108 ಪ್ರಕರಣಗಳನ್ನು ದಾಖಲಿಸಿದ್ದು , ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ3 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಿದ್ದು, ಕೋವಿಡ್ -19 ನಿಯಮಾವಳಿ ಉಲ್ಲಂಘಿಸಿ ಹೆಚ್ಚಿನ ಪ್ರಮಾಣದಲ್ಲಿ ಒಂದೆಡೆ ಸೇರಿದ ಸಾರ್ವಜನಿಕರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಲಾಗಿದೆ.</p>.<p>ಸಾರ್ವಜನಿಕ ಸ್ಥಳದಲ್ಲಿ ಉಗುಳಿದ ಸಾರ್ವಜನಿಕರ ವಿರುದ್ಧ 610 ಪ್ರಕರಣಗಳನ್ನು ದಾಖಲಿಸಿದ್ದು , ಸಾರ್ವಜನಿಕರ ಸ್ಥಳದಲ್ಲಿ ಮಧ್ಯಪಾನ , ಗುಟಕಾ, ತಂಬಾಕು ಉತ್ಪನ್ನಗಳ ಸೇವನೆ ಮಾಡಿದ ಸಾರ್ವಜನಿಕರ ವಿರುದ್ಧ ಕೋಟ್ಟಾ ಕಾಯ್ದೆ ಅಡಿಯಲ್ಲಿ 608 ಪ್ರಕರಣಗಳನ್ನು ದಾಖಲಿಸಿ ಸ್ಥಳದಲ್ಲಿಯೇ ದಂಡ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>